ರಾಜ್ಯ

ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ : ಯಾರಿಗೆಲ್ಲಾ ಅವಕಾಶ?

ಬೆಂಗಳೂರು : ಕರ್ನಾಟಕ ಬಿಜೆಪಿ ವತಿಯಿಂದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಚುನಾವಣಾ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.

ಪಕ್ಷ ನೇಮಿಸಿರುವ ರಾಜ್ಯ ಚುನಾವಣಾಧಿಕಾರಿಯಾಗಿ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿರುವ ಕ್ಯಾ. ಗಣೇಶ್ ಕಾರ್ಣಿಕ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ

ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ
ಹಾಸನ – ಸಿದ್ದೇಶ್ ನಾಗೇಂದ್ರ
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್ ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

13 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

16 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

19 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

23 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

23 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

23 hours ago