ಬೆಂಗಳೂರು: ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಿಸಿದೆ. ಈ ಪೈಕಿ 9 ಜಿಲ್ಲೆಗಳಲ್ಲಿ ಹಾಲಿ ಅಧ್ಯಕ್ಷರುಗಳನ್ನೇ ಮುಂದುವರಿಸಲಾಗಿದೆ.
ಈ ಬಗ್ಗೆ ರಾಜ್ಯಾಧ್ಯಕ್ಷ ಬಿ . ವೈ ವಿಜಯೇಂದ್ರ ಪ್ರಕಟಣೆ ಹೊರಡಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಪಕ್ಷದನಿಷ್ಠಾವಂತರನ್ನೂ ಗುರುತಿಸಿ ಜವಾಬ್ದಾರಿ ವಹಿಸಿದ್ದಾರೆ.
ಹಾಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್ ಅವರಿಗೆ ರಾಯಚೂರು ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಮಾಜಿ ಶಾಸಕರಾದ ಎಲ್.ನಾಗೇಂದ್ರ ಅವರಿಗೆ ಮೈಸೂರು ನಗರ ಜಿಲ್ಲಾಧ್ಯಕ್ಷ,ಸಿ.ಎಸ್.ನಿರಂಜನ್ಕುಮಾರ್ ಅವರಿಗೆ ಚಾಮರಾಜ ನಗರ ಜಿಲ್ಲಾಧ್ಯಕ್ಷ ಹಾಗೂ ಅರುಣ್ ಕುಮಾರ್ ಪೂಜಾರ್ ಅವರಿಗೆ ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ.
39 ಜಿಲ್ಲಾಧ್ಯಕ್ಷರ ಪೈಕಿ ಒಂದು ಜಿಲ್ಲೆಗೆ ಒಬ್ಬರು ಮಹಿಳೆಯರನ್ನು ನೇಮಿಸಲಾಗಿದೆ. ಬೆಳಗಾವಿ ನಗರ ಘಟಕದ ಅಧ್ಯಕ್ಷರನ್ನಾಗಿ ಗೀಡಾ ಸುತಾರ್ ಅವರನ್ನು ನೇಮಿಸಲಾಗಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…