ರಾಜ್ಯ

ರಾಜ್ಯ ಸರ್ಕಾರ ಹುಚ್ಚರ ಸಂತೆಯಾಗಿದೆ ಎಂದ ವಿಪಕ್ಷ ನಾಯಕ ಆರ್.ಅಶೋಕ್‌

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಸುಮಾರು ನಲವತ್ತು-ಐವತ್ತು ಜನರಿಂದ ಹಲ್ಲೆ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರ್.‌ಅಶೋಕ್‌ ಅವರು, ಸರ್ಕಾರ ಹುಚ್ಚರ ಸಂತೆಯಾಗಿದೆ. ಸಿ.ಟಿ.ರವಿ ಮೇಲೆ ಸುಮಾರು ನಲ್ವತ್ತು- ಐವತ್ತು ಜನ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಸಿ.ಟಿ.ರವಿ ಅವರನ್ನು ಕೊಲೆ ಮಾಡುವ ಯತ್ನ ಕೂಡ ನಡೆದಿದೆ. ಇದರಲ್ಲಿ ಸಚಿವರು ಮತ್ತು ಅವರ ಪಿಎ ಪಾತ್ರ ಇದೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಈ ಪ್ರಕರಣದಲ್ಲಿ ಅದೇ ಠಾಣೆಯಲ್ಲಿ ಎಫ್ಐಆರ್ ಮಾಡಬೇಕೆಂದು ನಾವೆಲ್ಲರೂ ಆಗ್ರಹಿಸಿದ್ದೆವು. ನಮ್ಮನ್ನು ಖಾನಾಪುರ ಪೊಲೀಸ್ ಠಾಣೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ಕಾಯಿಸಿ,‌ ನಂತರ ದೂರು ಸ್ವೀಕರಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಬುದ್ಧಿ ಭ್ರಮಣೆಯಾಗಿದೆ. ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಕೂಡ ಸುರಕ್ಷಿತ ಅಲ್ಲ. ಯಾರಾದರೂ ಅಪರಾಧಿಯನ್ನು ಬಂಧಿಸಿದರೆ ಅವರನ್ನು ಕಬ್ಬಿನ ಗದ್ದೆಯಲ್ಲಿ ಇರಿಸಬೇಕು ಎಂದು ರೂಲ್ಸ್ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವರನ್ನು ಕೇಳಿದರೆ ನನಗೆ ಏನೂ ಗೊತ್ತಿಲ್ಲ ಎಂದು ನಿರ್ಲಕ್ಷ್ಯದ ಉತ್ತರ ನೀಡುತ್ತಿದ್ದಾರೆ. ಹೀಗಾಗಿ ರಾಜ್ಯದ ಜನರಿಗೆ ಕಾಂಗ್ರೆಸ್‌ ಸರ್ಕಾರ ಕಿಂಚಿತ್ತೂ ಬೆಲೆ ಕೊಡುತ್ತಿಲ್ಲ. ಇದು ಹುಚ್ಚರ ಸಂತೆಯಾಗಿದೆ ಎಂದು ಕಿಡಿಕಾರಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

6 mins ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

11 mins ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

11 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

11 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

11 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

11 hours ago