ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಮ ಹಾಕುವುದರಲ್ಲಿ ಕಾಂಗ್ರೆಸ್ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ 2 ಲಕ್ಷ ಕೋಟಿ ರೂ. ಸಾಲ ಮಾಡಿದರೆ ಕರ್ನಾಟಕ ಜನ್ಮದಲ್ಲಿ ಮುಂದೆ ಬರಲು ಸಾಧ್ಯವಿಲ್ಲ ಎಂದು ದೂರಿದರು.
ಇನ್ನು ಕರ್ನಾಟಕಕ್ಕೆ ಕೃಷ್ಣರಾಜಸಾಗರ ಅಣೆಕಟ್ಟನ್ನು ನೀಡಿದ ಮನೆತನದವರ ಹೆಸರನ್ನು ತೆಗೆದು ಕೆ.ಆರ್.ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗೇನಾದರೂ ಹೆಸರು ಇಡಬೇಕು ಎಂದಿದ್ದರೆ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ. ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ. ಅನ್ನ-ನೀರು ಕೊಟ್ಟಿದೆ. ಮಾರಿ ಕಣ್ಣು ಹೋರಿ ಮೇಲೆ ಎನ್ನುವಂತೆ ಆ ಕುಟುಂಬವನ್ನು ಗುರಿ ಮಾಡಬಾರದು. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದರು.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…