ರಾಜ್ಯ

ಶಕ್ತಿ ಯೋಜನೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾಮ ಹಾಕುವುದರಲ್ಲಿ ಕಾಂಗ್ರೆಸ್‌ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ 2 ಲಕ್ಷ ಕೋಟಿ ರೂ. ಸಾಲ ಮಾಡಿದರೆ ಕರ್ನಾಟಕ ಜನ್ಮದಲ್ಲಿ ಮುಂದೆ ಬರಲು ಸಾಧ್ಯವಿಲ್ಲ ಎಂದು ದೂರಿದರು.

ಇನ್ನು ಕರ್ನಾಟಕಕ್ಕೆ ಕೃಷ್ಣರಾಜಸಾಗರ ಅಣೆಕಟ್ಟನ್ನು ನೀಡಿದ ಮನೆತನದವರ ಹೆಸರನ್ನು ತೆಗೆದು ಕೆ.ಆರ್.ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗೇನಾದರೂ ಹೆಸರು ಇಡಬೇಕು ಎಂದಿದ್ದರೆ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ. ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ. ಅನ್ನ-ನೀರು ಕೊಟ್ಟಿದೆ. ಮಾರಿ ಕಣ್ಣು ಹೋರಿ ಮೇಲೆ ಎನ್ನುವಂತೆ ಆ ಕುಟುಂಬವನ್ನು ಗುರಿ ಮಾಡಬಾರದು. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago