ರಾಜ್ಯ

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆನೇ ಇದ್ದಾನೆ : ತಮ್ಮನನ್ನು ನೆನೆದು ಶಿವಣ್ಣ ಭಾವುಕ

ಬೆಂಗಳೂರು : ಪುನೀತ್ ರಾಜ್‌ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ನೆರವೇರಿತ್ತು. ಇದೀಗ ಅಪ್ಪು ಸ್ಮಾರಕಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ಬಗ್ಗೆ ಶಿವಣ್ಣ ಭಾವುಕರಾಗಿದ್ದಾರೆ.

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆನೇ ಇದ್ದಾರೆ. ಇಲ್ಲಿ ಯಾಕೆ ನಾನು ಜಾಸ್ತಿ ಬರಲ್ಲ ಅಂದರೆ, ಅಪ್ಪು ಸಮಾಧಿಗೆ ಬಂದು ಪೂಜೆ ಮಾಡಿ ಅವರನ್ನು ಇಲ್ಲಿಂದ ದೂರ ಕಳಿಸೋಕೆ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅಪ್ಪು ಯಾವಾಗಲೂ ನಮ್ಮ ಮನಸ್ಸಿನಲ್ಲಿ, ಯೋಚನೆಯಲ್ಲಿರುತ್ತಾರೆ. ಅವರ ಬಗ್ಗೆ ಏನಾದರೂ ಮಾತು ಬಂದೇ ಬರುತ್ತೆ ಮನೆಯಲ್ಲಿ ಆಗ ತುಂಬಾ ಹರ್ಟ್ ಆಗುತ್ತದೆ. ಅಪ್ಪು ಕಣ್ಣು ನಮ್ಮನ್ನ ನೋಡ್ತಿದೆ. ಅದೇ ಸಮಾಧಾನ ಅಷ್ಟೇ ಎಂದು ಶಿವಣ್ಣ ಭಾವುಕರಾಗಿದ್ದಾರೆ.

ನಮ್ಮ ಅಪ್ಪನಿಗಿಂತ ಡಬಲ್ ಹೆಸರು ಪುನೀತ್ ಸಂಪಾದಿಸಿದ್ದಾರೆ. ಅಭಿಮಾನಿಗಳಿಗೆ ಅಪ್ಪು ಮೇಲಿರೋ ಪ್ರೀತಿ, ವಿಶ್ವಾಸ ನೋಡಿದ್ರೆ ತುಂಬಾ ಹೆಮ್ಮೆ ಅನಿಸುತ್ತದೆ. ಅದನ್ನ ನಾವು ಉಳಿಸಿಕೊಂಡು ಹೋಗುತ್ತೇವೆ ಎಂದು ಶಿವರಾಜ್‌ಕುಮಾರ್ ಹೇಳಿದರು.

ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವಣ್ಣ ದಂಪತಿ, ಮೊದಲು ತಂದೆ-ತಾಯಿ ಸಮಾಧಿಗೆ ನಮಸ್ಕರಿಸಿ ಬಳಿಕ ಅಪ್ಪು ಸಮಾಧಿಗೆ ನಮಿಸಿದರು. ಈ ವೇಳೆ, ಶಿವಣ್ಣ ನೋಡಲು ಅಭಿಮಾನಿಗಳ ದಂಡೇ ಭಾಗಿಯಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು.

lokesh

Recent Posts

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

6 mins ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

39 mins ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

5 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

5 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

5 hours ago