ರಾಜ್ಯ

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆನೇ ಇದ್ದಾನೆ : ತಮ್ಮನನ್ನು ನೆನೆದು ಶಿವಣ್ಣ ಭಾವುಕ

ಬೆಂಗಳೂರು : ಪುನೀತ್ ರಾಜ್‌ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ನೆರವೇರಿತ್ತು. ಇದೀಗ ಅಪ್ಪು ಸ್ಮಾರಕಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ಬಗ್ಗೆ ಶಿವಣ್ಣ ಭಾವುಕರಾಗಿದ್ದಾರೆ.

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆನೇ ಇದ್ದಾರೆ. ಇಲ್ಲಿ ಯಾಕೆ ನಾನು ಜಾಸ್ತಿ ಬರಲ್ಲ ಅಂದರೆ, ಅಪ್ಪು ಸಮಾಧಿಗೆ ಬಂದು ಪೂಜೆ ಮಾಡಿ ಅವರನ್ನು ಇಲ್ಲಿಂದ ದೂರ ಕಳಿಸೋಕೆ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅಪ್ಪು ಯಾವಾಗಲೂ ನಮ್ಮ ಮನಸ್ಸಿನಲ್ಲಿ, ಯೋಚನೆಯಲ್ಲಿರುತ್ತಾರೆ. ಅವರ ಬಗ್ಗೆ ಏನಾದರೂ ಮಾತು ಬಂದೇ ಬರುತ್ತೆ ಮನೆಯಲ್ಲಿ ಆಗ ತುಂಬಾ ಹರ್ಟ್ ಆಗುತ್ತದೆ. ಅಪ್ಪು ಕಣ್ಣು ನಮ್ಮನ್ನ ನೋಡ್ತಿದೆ. ಅದೇ ಸಮಾಧಾನ ಅಷ್ಟೇ ಎಂದು ಶಿವಣ್ಣ ಭಾವುಕರಾಗಿದ್ದಾರೆ.

ನಮ್ಮ ಅಪ್ಪನಿಗಿಂತ ಡಬಲ್ ಹೆಸರು ಪುನೀತ್ ಸಂಪಾದಿಸಿದ್ದಾರೆ. ಅಭಿಮಾನಿಗಳಿಗೆ ಅಪ್ಪು ಮೇಲಿರೋ ಪ್ರೀತಿ, ವಿಶ್ವಾಸ ನೋಡಿದ್ರೆ ತುಂಬಾ ಹೆಮ್ಮೆ ಅನಿಸುತ್ತದೆ. ಅದನ್ನ ನಾವು ಉಳಿಸಿಕೊಂಡು ಹೋಗುತ್ತೇವೆ ಎಂದು ಶಿವರಾಜ್‌ಕುಮಾರ್ ಹೇಳಿದರು.

ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವಣ್ಣ ದಂಪತಿ, ಮೊದಲು ತಂದೆ-ತಾಯಿ ಸಮಾಧಿಗೆ ನಮಸ್ಕರಿಸಿ ಬಳಿಕ ಅಪ್ಪು ಸಮಾಧಿಗೆ ನಮಿಸಿದರು. ಈ ವೇಳೆ, ಶಿವಣ್ಣ ನೋಡಲು ಅಭಿಮಾನಿಗಳ ದಂಡೇ ಭಾಗಿಯಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು.

lokesh

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

6 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

7 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

8 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

8 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

8 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

10 hours ago