ಬೆಂಗಳೂರು : ಪುನೀತ್ ರಾಜ್ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ನೆರವೇರಿತ್ತು. ಇದೀಗ ಅಪ್ಪು ಸ್ಮಾರಕಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ಬಗ್ಗೆ ಶಿವಣ್ಣ ಭಾವುಕರಾಗಿದ್ದಾರೆ.
ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆನೇ ಇದ್ದಾರೆ. ಇಲ್ಲಿ ಯಾಕೆ ನಾನು ಜಾಸ್ತಿ ಬರಲ್ಲ ಅಂದರೆ, ಅಪ್ಪು ಸಮಾಧಿಗೆ ಬಂದು ಪೂಜೆ ಮಾಡಿ ಅವರನ್ನು ಇಲ್ಲಿಂದ ದೂರ ಕಳಿಸೋಕೆ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅಪ್ಪು ಯಾವಾಗಲೂ ನಮ್ಮ ಮನಸ್ಸಿನಲ್ಲಿ, ಯೋಚನೆಯಲ್ಲಿರುತ್ತಾರೆ. ಅವರ ಬಗ್ಗೆ ಏನಾದರೂ ಮಾತು ಬಂದೇ ಬರುತ್ತೆ ಮನೆಯಲ್ಲಿ ಆಗ ತುಂಬಾ ಹರ್ಟ್ ಆಗುತ್ತದೆ. ಅಪ್ಪು ಕಣ್ಣು ನಮ್ಮನ್ನ ನೋಡ್ತಿದೆ. ಅದೇ ಸಮಾಧಾನ ಅಷ್ಟೇ ಎಂದು ಶಿವಣ್ಣ ಭಾವುಕರಾಗಿದ್ದಾರೆ.
ನಮ್ಮ ಅಪ್ಪನಿಗಿಂತ ಡಬಲ್ ಹೆಸರು ಪುನೀತ್ ಸಂಪಾದಿಸಿದ್ದಾರೆ. ಅಭಿಮಾನಿಗಳಿಗೆ ಅಪ್ಪು ಮೇಲಿರೋ ಪ್ರೀತಿ, ವಿಶ್ವಾಸ ನೋಡಿದ್ರೆ ತುಂಬಾ ಹೆಮ್ಮೆ ಅನಿಸುತ್ತದೆ. ಅದನ್ನ ನಾವು ಉಳಿಸಿಕೊಂಡು ಹೋಗುತ್ತೇವೆ ಎಂದು ಶಿವರಾಜ್ಕುಮಾರ್ ಹೇಳಿದರು.
ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವಣ್ಣ ದಂಪತಿ, ಮೊದಲು ತಂದೆ-ತಾಯಿ ಸಮಾಧಿಗೆ ನಮಸ್ಕರಿಸಿ ಬಳಿಕ ಅಪ್ಪು ಸಮಾಧಿಗೆ ನಮಿಸಿದರು. ಈ ವೇಳೆ, ಶಿವಣ್ಣ ನೋಡಲು ಅಭಿಮಾನಿಗಳ ದಂಡೇ ಭಾಗಿಯಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…