ರಾಜ್ಯ

ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್‌ಗೆ ಪತ್ರ ಬರೆದ ಮಾಜಿ ಸಿಎಂ ಕ್ರೇಜಿವಾಲ್‌

ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು ( ಸೆಪ್ಟೆಂಬರ್‌ 25 ) ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಪತ್ರ ಬರೆದಿದ್ದಾರೆ.

ಕ್ರೇಜಿವಾಲ್‌ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 ಪ್ರಶ್ನೆಗಳಿಗೆ ಹಾಗೂ ಬಿಜೆಪಿ ರಾಜಕೀಯ ಕುರಿತು ಉತ್ತರಗಳನ್ನು ಕೇಳಿದ್ದಾರೆ. ಅಲ್ಲದೇ ಬಿಜೆಪಿ ರಾಜಕೀಯ ದೇಶಕ್ಕೆ ಹಾನಿಕಾರವಾಗಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬಿಜೆಪಿಯ ನಡವಳಿಕೆ ಹೀಗೆಯೇ ಮುಂದುವರೆದರೆ ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ಕೊನೆಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಆರ್‌ಎಸ್‌ಎಸ್‌ನ ನಿವೃತ್ತಿ ವಯಸ್ಸಿನ ನಿಯಮವು ಬಿಜೆಪಿ ಪಕ್ಷದಲ್ಲಿ ಎಲ್‌.ಕೆ.ಅಡ್ವಾಣಿ ಹಾಗೂ ಮುರುಳಿ ಮನೋಹರ್‌ ಜೋಶಿಯಂತಹ ನಾಯಕರಿಗೆ ಅನ್ವಯಿಸುವಂತೆಯೇ ನರೇಂದ್ರ ಮೋದಿ ಅವರಿಗೂ ಅನ್ವಯಿಸುತ್ತದೆಯೋ ಅಥವಾ ಇಲ್ಲವೋ? ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಮ್ಮ ಪಕ್ಷಕ್ಕೆ ಆರ್‌ಎಸ್‌ಎಸ್‌ ಅಗತ್ಯವಿಲ್ಲ ಎಂದು ಹೇಳಿದಾಗ ಮೋಹನ್‌ ಭಾಗವತ್‌ ಅವರಿಗೆ ಹೇಗೆ ಅನಿಸಿತು? ಎಂಬುದನ್ನು ಉತ್ತರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago