ರಾಜ್ಯ

ನೀವು ಎವರೆಸ್ಟ್‌ ಚಿಕನ್‌ ಮಸಾಲಾ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ

ಉತ್ತರ ಕನ್ನಡ: ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್‌ ಸೂಚನೆ ನೀಡಿದ್ದಾರೆ.

ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್‌ ಆಕ್ಸೈಡ್‌ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದು, ಇದನ್ನು ಬಳಸಿದರೆ ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾಮಾನ್ಯವಾಗಿ ಮಸಾಲಾ ಪದರ್ಥದಲ್ಲಿ ಎಥಿಲಿನ್‌ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್‌ ಚಿಕಿನ್‌ ಮಸಾಲಾದಲ್ಲಿ ಈ ಪ್ರಮಾಣ ಶೇ.3.93ರಷ್ಟಿದೆ. ಇಷ್ಟೊಂದು ಪ್ರಮಾಣದ ಎಥಿಲಿನ್‌ ಆಕ್ಸೈಡ್‌ ಬಳಕೆ ಯೋಗ್ಯವಲ್ಲ, ಇದು ಹಾನಿಕಾರಿಕ ಎಂದು ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.

ಎವರೆಸ್ಟ್‌ ಚಿಕನ್‌ ಮಸಾಲಾ ಬಗ್ಗೆ ಆಹಾರ ಇಲಾಖೆಗೆ ಅನುಮಾನ ಇತ್ತು. ಈ ಬಗ್ಗೆ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಎವರೆಸ್ಟ್‌ ಮಸಾಲಾವನ್ನು ಪರೀಕ್ಷೆ ಮಾಡಿದಾಗ, ಶೇ.3.93 ರಷ್ಟು ರಾಸಾಯನಿಕ ಪ್ರಮಾಣ ಇರುವುದು ಕಂಡು ಬಂದಿದೆ. ಆಗಾಗಿ ಸಾರ್ವಜನಿಕರು ಈ ಚಿಕನ್‌ ಮಸಾಲಾವನ್ನು ಬಳಸಬಾರದು ಎಂದು ಮನವಿ ಮಾಡಿದರು.

ಹೀಗಾಗಲೇ ಎವರೆಸ್ಟ್‌ ಚಿಕನ್‌ ಮಸಾಲಾ ಕಂಪನಿಗೆ ನೋಟಿಸ್‌ ನೀಡಿದ್ದೇನೆ. ಕಂಪನಿ ಸರಬರಾಜು ನಿಲ್ಲಿಸಬೇಕು ಎಂದಿದ್ದೇವೆ. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ ಎಂದರು.

ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿಯೇ ಸರಬರಾಜು ನಿಲ್ಲಿಸಲು ಸೂಚಿಸಿದ್ದೇವೆ. ಸಾರ್ವಜನಿಕರು ಎವರೆಸ್ಟ್‌ ಚಿಕನ್‌ ಮಸಾಲಾ ಖರೀದಿಸಿದ್ದರೆ ಅಂಗಡಿಗಳಿಗೆ ವಾಪಸ್‌ ನೀಡಿ, ಕಂಪನಿ ಈಗಾಗಲೇ ಮಸಾಲಾ ಪೌಡರ್‌ ಪ್ಯಾಕೆಟ್‌ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಅಲ್ಲದೇ ಕಂಪನಿ ವಿರುದ್ಧ ಪ್ರಕರಣ ಸಹ ದಾಖಲು ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಎವರೆಸ್ಟ್‌ ಚಿಕನ್‌ ಮಸಾಲಾ ಅಲ್ಲದೇ ೧೫ ತರಹದ ಮಸಾಲಾ ಪೌಡರ್‌ಗಳನ್ನು ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಎಂಟಿಆರ್‌ ಮಸಾಲಾ ಪೌಡರ್‌ಗಳನ್ನು ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

2 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

19 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

32 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago