ಉತ್ತರ ಕನ್ನಡ: ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ.
ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದು, ಇದನ್ನು ಬಳಸಿದರೆ ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಾಮಾನ್ಯವಾಗಿ ಮಸಾಲಾ ಪದರ್ಥದಲ್ಲಿ ಎಥಿಲಿನ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕಿನ್ ಮಸಾಲಾದಲ್ಲಿ ಈ ಪ್ರಮಾಣ ಶೇ.3.93ರಷ್ಟಿದೆ. ಇಷ್ಟೊಂದು ಪ್ರಮಾಣದ ಎಥಿಲಿನ್ ಆಕ್ಸೈಡ್ ಬಳಕೆ ಯೋಗ್ಯವಲ್ಲ, ಇದು ಹಾನಿಕಾರಿಕ ಎಂದು ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.
ಎವರೆಸ್ಟ್ ಚಿಕನ್ ಮಸಾಲಾ ಬಗ್ಗೆ ಆಹಾರ ಇಲಾಖೆಗೆ ಅನುಮಾನ ಇತ್ತು. ಈ ಬಗ್ಗೆ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಎವರೆಸ್ಟ್ ಮಸಾಲಾವನ್ನು ಪರೀಕ್ಷೆ ಮಾಡಿದಾಗ, ಶೇ.3.93 ರಷ್ಟು ರಾಸಾಯನಿಕ ಪ್ರಮಾಣ ಇರುವುದು ಕಂಡು ಬಂದಿದೆ. ಆಗಾಗಿ ಸಾರ್ವಜನಿಕರು ಈ ಚಿಕನ್ ಮಸಾಲಾವನ್ನು ಬಳಸಬಾರದು ಎಂದು ಮನವಿ ಮಾಡಿದರು.
ಹೀಗಾಗಲೇ ಎವರೆಸ್ಟ್ ಚಿಕನ್ ಮಸಾಲಾ ಕಂಪನಿಗೆ ನೋಟಿಸ್ ನೀಡಿದ್ದೇನೆ. ಕಂಪನಿ ಸರಬರಾಜು ನಿಲ್ಲಿಸಬೇಕು ಎಂದಿದ್ದೇವೆ. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ ಎಂದರು.
ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿಯೇ ಸರಬರಾಜು ನಿಲ್ಲಿಸಲು ಸೂಚಿಸಿದ್ದೇವೆ. ಸಾರ್ವಜನಿಕರು ಎವರೆಸ್ಟ್ ಚಿಕನ್ ಮಸಾಲಾ ಖರೀದಿಸಿದ್ದರೆ ಅಂಗಡಿಗಳಿಗೆ ವಾಪಸ್ ನೀಡಿ, ಕಂಪನಿ ಈಗಾಗಲೇ ಮಸಾಲಾ ಪೌಡರ್ ಪ್ಯಾಕೆಟ್ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಅಲ್ಲದೇ ಕಂಪನಿ ವಿರುದ್ಧ ಪ್ರಕರಣ ಸಹ ದಾಖಲು ಮಾಡುತ್ತೇವೆ ಎಂದು ತಿಳಿಸಿದರು.
ಇನ್ನು ಎವರೆಸ್ಟ್ ಚಿಕನ್ ಮಸಾಲಾ ಅಲ್ಲದೇ ೧೫ ತರಹದ ಮಸಾಲಾ ಪೌಡರ್ಗಳನ್ನು ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಎಂಟಿಆರ್ ಮಸಾಲಾ ಪೌಡರ್ಗಳನ್ನು ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು.
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…