ರಾಜ್ಯ

ನೀವು ಎವರೆಸ್ಟ್‌ ಚಿಕನ್‌ ಮಸಾಲಾ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ

ಉತ್ತರ ಕನ್ನಡ: ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್‌ ಸೂಚನೆ ನೀಡಿದ್ದಾರೆ.

ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್‌ ಆಕ್ಸೈಡ್‌ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದು, ಇದನ್ನು ಬಳಸಿದರೆ ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾಮಾನ್ಯವಾಗಿ ಮಸಾಲಾ ಪದರ್ಥದಲ್ಲಿ ಎಥಿಲಿನ್‌ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್‌ ಚಿಕಿನ್‌ ಮಸಾಲಾದಲ್ಲಿ ಈ ಪ್ರಮಾಣ ಶೇ.3.93ರಷ್ಟಿದೆ. ಇಷ್ಟೊಂದು ಪ್ರಮಾಣದ ಎಥಿಲಿನ್‌ ಆಕ್ಸೈಡ್‌ ಬಳಕೆ ಯೋಗ್ಯವಲ್ಲ, ಇದು ಹಾನಿಕಾರಿಕ ಎಂದು ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.

ಎವರೆಸ್ಟ್‌ ಚಿಕನ್‌ ಮಸಾಲಾ ಬಗ್ಗೆ ಆಹಾರ ಇಲಾಖೆಗೆ ಅನುಮಾನ ಇತ್ತು. ಈ ಬಗ್ಗೆ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಎವರೆಸ್ಟ್‌ ಮಸಾಲಾವನ್ನು ಪರೀಕ್ಷೆ ಮಾಡಿದಾಗ, ಶೇ.3.93 ರಷ್ಟು ರಾಸಾಯನಿಕ ಪ್ರಮಾಣ ಇರುವುದು ಕಂಡು ಬಂದಿದೆ. ಆಗಾಗಿ ಸಾರ್ವಜನಿಕರು ಈ ಚಿಕನ್‌ ಮಸಾಲಾವನ್ನು ಬಳಸಬಾರದು ಎಂದು ಮನವಿ ಮಾಡಿದರು.

ಹೀಗಾಗಲೇ ಎವರೆಸ್ಟ್‌ ಚಿಕನ್‌ ಮಸಾಲಾ ಕಂಪನಿಗೆ ನೋಟಿಸ್‌ ನೀಡಿದ್ದೇನೆ. ಕಂಪನಿ ಸರಬರಾಜು ನಿಲ್ಲಿಸಬೇಕು ಎಂದಿದ್ದೇವೆ. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ ಎಂದರು.

ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿಯೇ ಸರಬರಾಜು ನಿಲ್ಲಿಸಲು ಸೂಚಿಸಿದ್ದೇವೆ. ಸಾರ್ವಜನಿಕರು ಎವರೆಸ್ಟ್‌ ಚಿಕನ್‌ ಮಸಾಲಾ ಖರೀದಿಸಿದ್ದರೆ ಅಂಗಡಿಗಳಿಗೆ ವಾಪಸ್‌ ನೀಡಿ, ಕಂಪನಿ ಈಗಾಗಲೇ ಮಸಾಲಾ ಪೌಡರ್‌ ಪ್ಯಾಕೆಟ್‌ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಅಲ್ಲದೇ ಕಂಪನಿ ವಿರುದ್ಧ ಪ್ರಕರಣ ಸಹ ದಾಖಲು ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಎವರೆಸ್ಟ್‌ ಚಿಕನ್‌ ಮಸಾಲಾ ಅಲ್ಲದೇ ೧೫ ತರಹದ ಮಸಾಲಾ ಪೌಡರ್‌ಗಳನ್ನು ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಎಂಟಿಆರ್‌ ಮಸಾಲಾ ಪೌಡರ್‌ಗಳನ್ನು ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

24 mins ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

26 mins ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

29 mins ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

31 mins ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

33 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

48 mins ago