ಉತ್ತರ ಕನ್ನಡ: ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ.
ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದು, ಇದನ್ನು ಬಳಸಿದರೆ ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಾಮಾನ್ಯವಾಗಿ ಮಸಾಲಾ ಪದರ್ಥದಲ್ಲಿ ಎಥಿಲಿನ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕಿನ್ ಮಸಾಲಾದಲ್ಲಿ ಈ ಪ್ರಮಾಣ ಶೇ.3.93ರಷ್ಟಿದೆ. ಇಷ್ಟೊಂದು ಪ್ರಮಾಣದ ಎಥಿಲಿನ್ ಆಕ್ಸೈಡ್ ಬಳಕೆ ಯೋಗ್ಯವಲ್ಲ, ಇದು ಹಾನಿಕಾರಿಕ ಎಂದು ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.
ಎವರೆಸ್ಟ್ ಚಿಕನ್ ಮಸಾಲಾ ಬಗ್ಗೆ ಆಹಾರ ಇಲಾಖೆಗೆ ಅನುಮಾನ ಇತ್ತು. ಈ ಬಗ್ಗೆ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಎವರೆಸ್ಟ್ ಮಸಾಲಾವನ್ನು ಪರೀಕ್ಷೆ ಮಾಡಿದಾಗ, ಶೇ.3.93 ರಷ್ಟು ರಾಸಾಯನಿಕ ಪ್ರಮಾಣ ಇರುವುದು ಕಂಡು ಬಂದಿದೆ. ಆಗಾಗಿ ಸಾರ್ವಜನಿಕರು ಈ ಚಿಕನ್ ಮಸಾಲಾವನ್ನು ಬಳಸಬಾರದು ಎಂದು ಮನವಿ ಮಾಡಿದರು.
ಹೀಗಾಗಲೇ ಎವರೆಸ್ಟ್ ಚಿಕನ್ ಮಸಾಲಾ ಕಂಪನಿಗೆ ನೋಟಿಸ್ ನೀಡಿದ್ದೇನೆ. ಕಂಪನಿ ಸರಬರಾಜು ನಿಲ್ಲಿಸಬೇಕು ಎಂದಿದ್ದೇವೆ. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ ಎಂದರು.
ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿಯೇ ಸರಬರಾಜು ನಿಲ್ಲಿಸಲು ಸೂಚಿಸಿದ್ದೇವೆ. ಸಾರ್ವಜನಿಕರು ಎವರೆಸ್ಟ್ ಚಿಕನ್ ಮಸಾಲಾ ಖರೀದಿಸಿದ್ದರೆ ಅಂಗಡಿಗಳಿಗೆ ವಾಪಸ್ ನೀಡಿ, ಕಂಪನಿ ಈಗಾಗಲೇ ಮಸಾಲಾ ಪೌಡರ್ ಪ್ಯಾಕೆಟ್ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಅಲ್ಲದೇ ಕಂಪನಿ ವಿರುದ್ಧ ಪ್ರಕರಣ ಸಹ ದಾಖಲು ಮಾಡುತ್ತೇವೆ ಎಂದು ತಿಳಿಸಿದರು.
ಇನ್ನು ಎವರೆಸ್ಟ್ ಚಿಕನ್ ಮಸಾಲಾ ಅಲ್ಲದೇ ೧೫ ತರಹದ ಮಸಾಲಾ ಪೌಡರ್ಗಳನ್ನು ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಎಂಟಿಆರ್ ಮಸಾಲಾ ಪೌಡರ್ಗಳನ್ನು ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…