ರಾಜ್ಯ

ನೀವು ಎವರೆಸ್ಟ್‌ ಚಿಕನ್‌ ಮಸಾಲಾ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ

ಉತ್ತರ ಕನ್ನಡ: ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್‌ ಸೂಚನೆ ನೀಡಿದ್ದಾರೆ.

ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್‌ ಆಕ್ಸೈಡ್‌ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದು, ಇದನ್ನು ಬಳಸಿದರೆ ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾಮಾನ್ಯವಾಗಿ ಮಸಾಲಾ ಪದರ್ಥದಲ್ಲಿ ಎಥಿಲಿನ್‌ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್‌ ಚಿಕಿನ್‌ ಮಸಾಲಾದಲ್ಲಿ ಈ ಪ್ರಮಾಣ ಶೇ.3.93ರಷ್ಟಿದೆ. ಇಷ್ಟೊಂದು ಪ್ರಮಾಣದ ಎಥಿಲಿನ್‌ ಆಕ್ಸೈಡ್‌ ಬಳಕೆ ಯೋಗ್ಯವಲ್ಲ, ಇದು ಹಾನಿಕಾರಿಕ ಎಂದು ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.

ಎವರೆಸ್ಟ್‌ ಚಿಕನ್‌ ಮಸಾಲಾ ಬಗ್ಗೆ ಆಹಾರ ಇಲಾಖೆಗೆ ಅನುಮಾನ ಇತ್ತು. ಈ ಬಗ್ಗೆ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಎವರೆಸ್ಟ್‌ ಮಸಾಲಾವನ್ನು ಪರೀಕ್ಷೆ ಮಾಡಿದಾಗ, ಶೇ.3.93 ರಷ್ಟು ರಾಸಾಯನಿಕ ಪ್ರಮಾಣ ಇರುವುದು ಕಂಡು ಬಂದಿದೆ. ಆಗಾಗಿ ಸಾರ್ವಜನಿಕರು ಈ ಚಿಕನ್‌ ಮಸಾಲಾವನ್ನು ಬಳಸಬಾರದು ಎಂದು ಮನವಿ ಮಾಡಿದರು.

ಹೀಗಾಗಲೇ ಎವರೆಸ್ಟ್‌ ಚಿಕನ್‌ ಮಸಾಲಾ ಕಂಪನಿಗೆ ನೋಟಿಸ್‌ ನೀಡಿದ್ದೇನೆ. ಕಂಪನಿ ಸರಬರಾಜು ನಿಲ್ಲಿಸಬೇಕು ಎಂದಿದ್ದೇವೆ. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ ಎಂದರು.

ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿಯೇ ಸರಬರಾಜು ನಿಲ್ಲಿಸಲು ಸೂಚಿಸಿದ್ದೇವೆ. ಸಾರ್ವಜನಿಕರು ಎವರೆಸ್ಟ್‌ ಚಿಕನ್‌ ಮಸಾಲಾ ಖರೀದಿಸಿದ್ದರೆ ಅಂಗಡಿಗಳಿಗೆ ವಾಪಸ್‌ ನೀಡಿ, ಕಂಪನಿ ಈಗಾಗಲೇ ಮಸಾಲಾ ಪೌಡರ್‌ ಪ್ಯಾಕೆಟ್‌ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಅಲ್ಲದೇ ಕಂಪನಿ ವಿರುದ್ಧ ಪ್ರಕರಣ ಸಹ ದಾಖಲು ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಎವರೆಸ್ಟ್‌ ಚಿಕನ್‌ ಮಸಾಲಾ ಅಲ್ಲದೇ ೧೫ ತರಹದ ಮಸಾಲಾ ಪೌಡರ್‌ಗಳನ್ನು ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಎಂಟಿಆರ್‌ ಮಸಾಲಾ ಪೌಡರ್‌ಗಳನ್ನು ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago