ರಾಜ್ಯ

ನೀವು ಎವರೆಸ್ಟ್‌ ಚಿಕನ್‌ ಮಸಾಲಾ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಿ

ಉತ್ತರ ಕನ್ನಡ: ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್‌ ಸೂಚನೆ ನೀಡಿದ್ದಾರೆ.

ಎವರೆಸ್ಟ್‌ ಚಿಕನ್‌ ಮಸಾಲಾದಲ್ಲಿ ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್‌ ಆಕ್ಸೈಡ್‌ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದು, ಇದನ್ನು ಬಳಸಿದರೆ ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾಮಾನ್ಯವಾಗಿ ಮಸಾಲಾ ಪದರ್ಥದಲ್ಲಿ ಎಥಿಲಿನ್‌ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್‌ ಚಿಕಿನ್‌ ಮಸಾಲಾದಲ್ಲಿ ಈ ಪ್ರಮಾಣ ಶೇ.3.93ರಷ್ಟಿದೆ. ಇಷ್ಟೊಂದು ಪ್ರಮಾಣದ ಎಥಿಲಿನ್‌ ಆಕ್ಸೈಡ್‌ ಬಳಕೆ ಯೋಗ್ಯವಲ್ಲ, ಇದು ಹಾನಿಕಾರಿಕ ಎಂದು ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.

ಎವರೆಸ್ಟ್‌ ಚಿಕನ್‌ ಮಸಾಲಾ ಬಗ್ಗೆ ಆಹಾರ ಇಲಾಖೆಗೆ ಅನುಮಾನ ಇತ್ತು. ಈ ಬಗ್ಗೆ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಎವರೆಸ್ಟ್‌ ಮಸಾಲಾವನ್ನು ಪರೀಕ್ಷೆ ಮಾಡಿದಾಗ, ಶೇ.3.93 ರಷ್ಟು ರಾಸಾಯನಿಕ ಪ್ರಮಾಣ ಇರುವುದು ಕಂಡು ಬಂದಿದೆ. ಆಗಾಗಿ ಸಾರ್ವಜನಿಕರು ಈ ಚಿಕನ್‌ ಮಸಾಲಾವನ್ನು ಬಳಸಬಾರದು ಎಂದು ಮನವಿ ಮಾಡಿದರು.

ಹೀಗಾಗಲೇ ಎವರೆಸ್ಟ್‌ ಚಿಕನ್‌ ಮಸಾಲಾ ಕಂಪನಿಗೆ ನೋಟಿಸ್‌ ನೀಡಿದ್ದೇನೆ. ಕಂಪನಿ ಸರಬರಾಜು ನಿಲ್ಲಿಸಬೇಕು ಎಂದಿದ್ದೇವೆ. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ ಎಂದರು.

ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿಯೇ ಸರಬರಾಜು ನಿಲ್ಲಿಸಲು ಸೂಚಿಸಿದ್ದೇವೆ. ಸಾರ್ವಜನಿಕರು ಎವರೆಸ್ಟ್‌ ಚಿಕನ್‌ ಮಸಾಲಾ ಖರೀದಿಸಿದ್ದರೆ ಅಂಗಡಿಗಳಿಗೆ ವಾಪಸ್‌ ನೀಡಿ, ಕಂಪನಿ ಈಗಾಗಲೇ ಮಸಾಲಾ ಪೌಡರ್‌ ಪ್ಯಾಕೆಟ್‌ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಅಲ್ಲದೇ ಕಂಪನಿ ವಿರುದ್ಧ ಪ್ರಕರಣ ಸಹ ದಾಖಲು ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಎವರೆಸ್ಟ್‌ ಚಿಕನ್‌ ಮಸಾಲಾ ಅಲ್ಲದೇ ೧೫ ತರಹದ ಮಸಾಲಾ ಪೌಡರ್‌ಗಳನ್ನು ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಎಂಟಿಆರ್‌ ಮಸಾಲಾ ಪೌಡರ್‌ಗಳನ್ನು ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

35 mins ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

2 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

2 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

2 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

3 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

3 hours ago