arjuna elephant carrying mysore ambari this year
ಬೆಂಗಳೂರು : ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಲಿದ್ದಾನೆ ಎಂದು ತಿಳಿಸಿದರು.
ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ ಎಂದರು.
ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತೀಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ ಎಂದು ತಿಳಿಸಿದರು.
ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳಿಗೆ ಆ.4ರಂದು ನಡೆಯುವ ಗಜಪಯಣದಲ್ಲಿ ವಿಧ್ಯುಕ್ತವಾಗಿ ಮತ್ತು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಗುವುದು ಎಂದೂ ತಿಳಿಸಿದರು.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಉನ್ನತಾಧಿಕಾರಿಗಳಾದ ಮಹೇಶ್ ಶಿರೂರ್, ಮನೋಜ್ ಕುಮಾರ್, ಮಾಲತಿ, ಪ್ರಭುಗೌಡ ಬಿರಾದಾರ್ ಪಾಲ್ಗೊಂಡಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…