ರಾಜ್ಯ

ಅರ್ಜುನನಿಗೆ ಸಿಕ್ಕ ʼರಾಜʼ ಮರ್ಯಾದೆ

ಮೈಸೂರು:  ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಸತತ ೮ ಬಾರಿ ಅಂಬಾರಿಹೊತ್ತು ಗಜಗಾಂಭೀರ್ಯದಲ್ಲಿ ನಡೆಯುತ್ತಿದ್ದ ಕ್ಯಾಪ್ಟನ್‌ ಅರ್ಜುನನಿಗೆ ಒಡೆಯರ್‌ ದಂಪತಿಗಳು ಅಂತಿಮ ನಮನ ಸಲ್ಲಿಸಿದ್ದಾರೆ.

ನಾಡಿನ ಅಚ್ಚುಮಚ್ಚಿನ ಕ್ಯಾಪ್ಟನ್‌, ಲೀಡರ್‌ ಅರ್ಜುನ, ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿಗೆ ಸಾವನ್ನಪಿತ್ತು. ಸಕಲ ಸರ್ಕಾರಿ ಗೌರವದೊಂದಿಗೆ ಅರ್ಜುನನ ಅಂತ್ಯ ಸಂಸ್ಕಾರವನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಜಬ್ಬಳ್ಳಿ ಕಟ್ಟೆ ಗ್ರಾಮದಲ್ಲಿ ಮಾಡಲಾಗಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ಪ್ರಶ್ನೆಗಳು ಹಾಗೂ ಅನುಮಾನಗಳು ವ್ಯಕ್ತವಾಗಿದ್ದವು. ಅವುಗಳಲ್ಲಿ ಅರ್ಜುನನ ಅಂತ್ಯಸಂಸ್ಕಾರಕ್ಕೆ ರಾಜವಂಶಸ್ತರು ಗೈರಾದದ್ದು ಒಂದು.

 

ಇದೀಗ ಎಲ್ಲಾ ಉಹಾಪೋಹಗಳಿಗೆ ಉತ್ತರದಂತೆ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಜಾಮರಾಜ ಒಡೆಯರ್‌ ಹಾಗೂ ಪತ್ನಿ ತ್ರಿಷಿಕಾ ಕುಮಾರಿ ಸಿಂಗ್‌ ಅವರು ಅರ್ಜುನನ ಅಂತ್ಯಸಂಸ್ಕಾರ ಮಾಡಿದ್ದ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮೈಸೂರು ದಸರಾ ಮಹೋತ್ಸವದಲ್ಲಿ ಸುಮಾರು ೮ ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯು ದೈವಾಧೀನವಾಗಿದ್ದು ಅತೀವ ದುಃಖವನ್ನುಂಟುಮಾಡಿದೆ. ಪೂರ್ವ ನಿಯೋಜಿತ ಕಾರ್ಯಕ್ರಮಗಳಿಂದಾಗಿ ಪ್ರಯಾಣದಲ್ಲಿದ್ದು ಅರ್ಜುನನ ಅಂತ್ಯಸಂಸ್ಕಾರಕ್ಕೆ ಭೇಟಿ ನೀಡಲಾಗದ ಕಾರಣ ಇಂದು ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಅವನ ಸದ್ಗತಿಗಾಗಿ ಪ್ರಾರ್ಥಿಸಲಾಯಿತು ಎಂದು ತಿಳಿಸಿದ್ದಾರೆ.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

3 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

3 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

3 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

4 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

4 hours ago