ರಾಜ್ಯ

ಅರ್ಜುನನಿಗೆ ಸಿಕ್ಕ ʼರಾಜʼ ಮರ್ಯಾದೆ

ಮೈಸೂರು:  ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಸತತ ೮ ಬಾರಿ ಅಂಬಾರಿಹೊತ್ತು ಗಜಗಾಂಭೀರ್ಯದಲ್ಲಿ ನಡೆಯುತ್ತಿದ್ದ ಕ್ಯಾಪ್ಟನ್‌ ಅರ್ಜುನನಿಗೆ ಒಡೆಯರ್‌ ದಂಪತಿಗಳು ಅಂತಿಮ ನಮನ ಸಲ್ಲಿಸಿದ್ದಾರೆ.

ನಾಡಿನ ಅಚ್ಚುಮಚ್ಚಿನ ಕ್ಯಾಪ್ಟನ್‌, ಲೀಡರ್‌ ಅರ್ಜುನ, ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿಗೆ ಸಾವನ್ನಪಿತ್ತು. ಸಕಲ ಸರ್ಕಾರಿ ಗೌರವದೊಂದಿಗೆ ಅರ್ಜುನನ ಅಂತ್ಯ ಸಂಸ್ಕಾರವನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಜಬ್ಬಳ್ಳಿ ಕಟ್ಟೆ ಗ್ರಾಮದಲ್ಲಿ ಮಾಡಲಾಗಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ಪ್ರಶ್ನೆಗಳು ಹಾಗೂ ಅನುಮಾನಗಳು ವ್ಯಕ್ತವಾಗಿದ್ದವು. ಅವುಗಳಲ್ಲಿ ಅರ್ಜುನನ ಅಂತ್ಯಸಂಸ್ಕಾರಕ್ಕೆ ರಾಜವಂಶಸ್ತರು ಗೈರಾದದ್ದು ಒಂದು.

 

ಇದೀಗ ಎಲ್ಲಾ ಉಹಾಪೋಹಗಳಿಗೆ ಉತ್ತರದಂತೆ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಜಾಮರಾಜ ಒಡೆಯರ್‌ ಹಾಗೂ ಪತ್ನಿ ತ್ರಿಷಿಕಾ ಕುಮಾರಿ ಸಿಂಗ್‌ ಅವರು ಅರ್ಜುನನ ಅಂತ್ಯಸಂಸ್ಕಾರ ಮಾಡಿದ್ದ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮೈಸೂರು ದಸರಾ ಮಹೋತ್ಸವದಲ್ಲಿ ಸುಮಾರು ೮ ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯು ದೈವಾಧೀನವಾಗಿದ್ದು ಅತೀವ ದುಃಖವನ್ನುಂಟುಮಾಡಿದೆ. ಪೂರ್ವ ನಿಯೋಜಿತ ಕಾರ್ಯಕ್ರಮಗಳಿಂದಾಗಿ ಪ್ರಯಾಣದಲ್ಲಿದ್ದು ಅರ್ಜುನನ ಅಂತ್ಯಸಂಸ್ಕಾರಕ್ಕೆ ಭೇಟಿ ನೀಡಲಾಗದ ಕಾರಣ ಇಂದು ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಅವನ ಸದ್ಗತಿಗಾಗಿ ಪ್ರಾರ್ಥಿಸಲಾಯಿತು ಎಂದು ತಿಳಿಸಿದ್ದಾರೆ.

andolanait

Recent Posts

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

3 hours ago

ಬಾಲ್ಯವನ್ನು ನೆನಪಿಸಿದ ಗುರು-ಶಿಷ್ಯರ ಸ್ನೇಹ ಸಮ್ಮಿಲನ

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…

3 hours ago

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

3 hours ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

3 hours ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

14 hours ago