ಬೆಂಗಳೂರು: ಪಾಕಿಸ್ತಾನ ಪ್ರಜೆ ಅಲ್ಲದೆ ವಿದೇಶದವರು ಬೆಂಗಳೂರಿಗೆ ಬಂದು ಪಾಸ್ಪೋರ್ಟ್ ಮಾಡಿಕೊಳ್ಳುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲತೆವಾಗಿದೆ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಮೂಲದ ಪ್ರಜೆಗಳು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ದೊರೆತ ತಕ್ಷಣವೇ ನಮ್ಮ ಪೊಲೀಸರು ಪಾಕ್ ಪ್ರಜೆಗಳನ್ನು ಬಂಧಿಸಿದ್ದಾರೆ. ನಮ್ಮ ರಾಜ್ಯ ಪೊಲೀಸರು ಸಮರ್ಥರಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಇನ್ನುಳಿದಿರುವ ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ವಿಷಯವಾಗಿ ಮಾತನಾಡಿದ ಪರಮೇಶ್ವರ್ ಅವರು, ಸತೀಶ್ ಅವರ ಪುತ್ರಿ ಈಗ ಸಂಸದೆಯಾಗಿದ್ದಾರೆ. ಹೀಗಾಗಿ ಪುತ್ರಿಗೆ ತಂಗಲು ಕ್ವಾರ್ಟರ್ಸ್ ಬೇಕು ಎಂಬ ಕಾರಣಕ್ಕೆ ದೆಹಲಿಗೆ ಹೋಗಿದ್ದರು ಅಷ್ಟೇ. ಆ ವೇಳೆ ಪಕ್ಷದ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಅದರಲ್ಲಿ ಏನು ತಪ್ಪಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…