ರಾಜ್ಯ

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ ಎಂದು ಖ್ಯಾತ ವಿಮರ್ಶಕ, ಲೇಖಕ ಡಾ.ಓ ಎಲ್ ನಾಗಭೂಷಣ ಸ್ವಾಮಿ ಹೇಳಿದರು.

ಅವರು ಇಂದು(ಮಾರ್ಚ್.‌13) ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದೊಂದಿಗೆ ಜ್ಞಾನಭಾರತಿಯಲ್ಲಿರುವ ಜಿ ಎಸ್ ಎಸ್ ಸಭಾಂಗಣದಲ್ಲಿ ರಾಷ್ಟ್ರಕವಿ ಡಾ.ಜಿ ಎಸ್ ಶಿವರುದ್ರಪ್ಪ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಅಂಗಳದಲ್ಲಿ ತಿಂಗಳ ಪುಸ್ತಕ ಕಾರ್ಯಕ್ರಮದಲ್ಲಿ ಜಿ ಎಸ್ ಶಿವರುದ್ರಪ್ಪ ಅವರ ಕಾವ್ಯಾರ್ಥ ಚಿಂತನ ಕೃತಿಯನ್ನು ಕುರಿತು ಮಾತನಾಡಿದರು.

ಕಾವ್ಯ ಮೀಮಾಂಸೆ ಹಾಗೂ ವಿಮರ್ಶೆಯ ಪರಿಭಾಷೆ ಕಾಲದಿಂದ ಕಾಲಕ್ಕೆ ಬದಲಾಗುತ್ತದೆ. ನಾವು ಇಂದಿಗೂ ಪಾಶ್ಚಾತ್ಯ ವಿಮರ್ಶೆಯ ಮಾದರಿಗಳನ್ನು ಇಟ್ಟುಕೊಂಡೆ ಸಾಹಿತ್ಯ ಕೃತಿಯೊಂದರ ತೌಲಾನಿಕ ಅಧ್ಯಯನ ಮಾಡುತ್ತೇವೆ. ಆದರೆ ಆಧುನಿಕ ಕಾಲಘಟ್ಟದಲ್ಲಿ ಇಂದಿನ ಮಾದರಿಗಳು ಬೇರೆಯದೆ ಆಗಿದೆ ಎಂದು ಅವರು ತಿಳಿಸಿದರು.

ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಯ ಮಾದರಿಯನ್ನು ಹಾಕಿಕೊಟ್ಟದ್ದು ಕುವೆಂಪು ಅವರು, ಕುವೆಂಪು ವಿಮರ್ಶೆಯ ಪರಿಭಾಷೆ ಸಿದ್ಧಾಂತ ಪರಿಕಲ್ಪನೆಗಳ ಬಗ್ಗೆ ಒಂದು ಸಿದ್ದ ಮಾದರಿಯನ್ನು ತೋರಿಸಿಕೊಟ್ಟರು ಆದರೆ ಅವು ಪಾಶ್ಚಾತ್ಯ ವಿಮರ್ಶೆಯ ದಟ್ಟ ಪ್ರಭಾವದಲ್ಲಿದ್ದವು, ಆ ದಾರಿಯಲ್ಲಿ ಮುಂದುವರೆದು ಕನ್ನಡದ ವಿಮರ್ಶೆಯೇ ಮತ್ತು ಪೌರಾಣಿಕತೆ ಹೇಗಿರಬೇಕು ಎಂದು ತೋರಿಸಿಕೊಟ್ಟವರು ಜಿ ಎಸ್ ಶಿವರುದ್ರಪ್ಪ ಅವರು, ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ತೌಲಾನಿಕ ಅಧ್ಯಯನದ ಒಂದು ವಿಭಾಗವನ್ನೇ ಆರಂಭಿಸಿದರು ಅದರ ಸಂಪೂರ್ಣ ಶ್ರೇಯ ಜಿಎಸ್ಎಸ್ ಅವರಿಗೆ ಸಲ್ಲುತ್ತದೆ ಎಂದು ಓಎಲ್ ನಾಗಭೂಷಣ ಸ್ವಾಮಿ ಹೇಳಿದರು.

ಕಾವ್ಯಮೀಮಾಂಸೆ ಯಾಕೆ ಓದಬೇಕು ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಹಾಕಿಕೊಳ್ಳಬೇಕು ಬರೆಯುವವರು ಅದಕ್ಕೆ ತಮಗೆ ತಾವೇ ಉತ್ತರವನ್ನು ಕಂಡುಕೊಳ್ಳಬೇಕು ಆಗ ಮಾತ್ರ ಅವರ ಸಾಹಿತ್ಯ ವಿಮರ್ಶೆಯ ಪರಿಭಾಷೆಯ ಒಳಗೆ ಗಟ್ಟಿಯಾಗಿ ನಿಲ್ಲುತ್ತದೆ ಎಂದು ಅವರು ತಿಳಿಸಿದರು. ಒಂದು ಸಾಹಿತ್ಯ ಕೃತಿಯ ಅರ್ಥ ನಿರ್ಣಯಿಸುವವರು ಯಾರು ಓದುಗರೆ, ವಿಮರ್ಶಕರೇ , ಅಥವಾ ಬರಹಗಾರನೇ ಎಂಬ ಪ್ರಶ್ನೆ ಅಂದಿಗೂ ಇತ್ತು, ಇಂದಿಗೂ ಇದೆ, ಮುಂದೆಯೂ ಇರುತ್ತದೆ ಎಂದು ಅವರು ತಿಳಿಸಿದರು.

ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ಮಾನಸ ಅವರು ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಅವರ ಸಾಹಿತ್ಯದ ಸಾಧನೆ ಬಣ್ಣಿಸುವುದು ಅತ್ಯಂತ ಕಷ್ಟದ ಕೆಲಸ. ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಪ್ರಾಧಿಕಾರ ಈ ಕಾರ್ಯಕ್ರಮ ಆಯೋಜಿಸಿದೆ, ವಿದ್ಯಾರ್ಥಿಗಳು ಪ್ರಾಧಿಕಾರದ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಾಹಿತ್ಯ ಜೀವನ ವಿಧಾನವನ್ನು ರೂಪಿಸುತ್ತದೆ ಬದುಕುವುದನ್ನು ಕಲಿಸುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಸಾಹಿತ್ಯದ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ಎಚ್.ಶಶಿಕಲಾ ಮಾತನಾಡಿ, ಸಾಹಿತ್ಯ ವಿಮರ್ಶೆ ಒಂದು ಸಾಹಿತ್ಯ ಕೃತಿಯನ್ನು ಅರ್ಥಮಾಡಿಕೊಳ್ಳಲು ಅತ್ಯಂತ ಅವಶ್ಯಕವಿದೆ, ಸಾಹಿತ್ಯ ಗಟ್ಟಿಯಾಗಲು ಹಾಗೂ ಉತ್ತಮ ಕೃತಿಗಳ ಪರ ಬರಬೇಕಾದರೆ ಅವುಗಳನ್ನು ವಿಮರ್ಶಕರು ಓರೆ ಹಚ್ಚಿ ನೋಡಬೇಕಾದ ಅವಶ್ಯಕತೆ ಇದೆ ಎಂದರು.

ಸಮಾರಂಭದಲ್ಲಿ ಪ್ರಾಧಿಕಾರದ ಆಡಳಿತ ಅಧಿಕಾರಿ ಕೆ.ಬಿ.ಕಿರಣ್ ಸಿಂಗ್ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಡೊಮಿನಿಕ್ ಡಾ.ಮುನಿಯಪ್ಪ ಹಾಗೂ ಡಾ. ವಡ್ಡೆ ಹೇಮಲತಾ ಅವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

13 mins ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

30 mins ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

51 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

2 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

10 hours ago