ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ
ಜಲಾಶಯಗಳಲ್ಲಿ ನೀರು ಕುಸಿತ – ನಾಳೆಯೇ ಏಜೆನ್ಸಿ ಅಂತಿಮ
ಬೆಂಗಳೂರು : ರಾಜ್ಯದ ವಿವಿಧ ಜಲಾನಯನ ಪ್ರದೇಶಗಳಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆ ಮತ್ತು ಜಲಾಶಯಗಳಿಗೆ ಒಳಹರಿವು ಕುಸಿದಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಕೈಗೊಳ್ಳಲು ರಾಜ್ಯ ಸರ್ಕಾರ ಈಗಾಗಲೇ ಅಧಿಕೃತ ನಿರ್ಧಾರ ಕೈಗೊಂಡಿದ್ದು, ಈ ಕುರಿತು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ಯಶಸ್ವಿಯಾಗಿ ನಡೆಯಿತು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಸುದೀರ್ಘ ಸಭೆಯಲ್ಲಿ ಮುಂಗಾರು ಮಾರುತಗಳ ಪ್ರಸ್ತುತ ಸ್ಥಿತಿಗತಿ ಮತ್ತು ಪ್ರಮುಖ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಕುರಿತು ಕೂಲಂಕಷವಾಗಿ ಚರ್ಚೆ ನಡೆಸಲಾಯಿತು.
ಮೂರು ನಿಗಮಗಳೊಂದಿಗೆ ಪ್ರತ್ಯೇಕ ಸಮಾಲೋಚನೆ
ಕೃಷ್ಣಾ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದರು. ಆಯಾ ನಿಗಮಗಳ ವ್ಯಾಪ್ತಿಯ ಅಣೆಕಟ್ಟುಗಳ ನೀರಿನ ಲಭ್ಯತೆ, ದೈನಂದಿನ ಒಳಹರಿವಿನ ವರದಿ ಮತ್ತು ಕಾಲುವೆಗಳಿಗೆ ನೀರು ಹರಿಸುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು, ರೈತರ ಹಿತದೃಷ್ಟಿಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲು ಸೂಚನೆ ನೀಡಿದರು.
ಇಂದಿನಿಂದಲೇ ಸಾಧ್ಯತಾ ಅಧ್ಯಯನ ಆರಂಭ
ಮಳೆ ಕೊರತೆ ನೀಗಿಸಲು ಸರ್ಕಾರ ಕೈಗೊಂಡ ನಿರ್ಧಾರದಂತೆ ಇಂದಿನಿಂದಲೇ ಮೋಡ ಬಿತ್ತನೆ ಸಾಧ್ಯತಾ ಅಧ್ಯಯನ ಅಧಿಕೃತವಾಗಿ ಆರಂಭಗೊಂಡಿದೆ. ಈ ಅಧ್ಯಯನದ ವರದಿ ಮತ್ತು ಸಾಧಕ-ಬಾಧಕಗಳನ್ನು ಪರಿಶೀಲಿಸಲು ನಾಳೆ ಮತ್ತೊಂದು ಉನ್ನತ ಮಟ್ಟದ ಪುನರ್ ಪರಿಶೀಲನಾ ಸಭೆ ಕರೆಯಲಾಗಿದೆ.
ನಾಳಿನ ಸಭೆಯಲ್ಲಿ KSNDMC ತಜ್ಞರು, ಪ್ರಮುಖ ಕಾರ್ಯದರ್ಶಿಗಳು ಮತ್ತು ಅಪರ ಮುಖ್ಯ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದು, ಮೋಡ ಬಿತ್ತನೆ ಕಾರ್ಯಾಚರಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸಮರ್ಥ ಏಜೆನ್ಸಿಯನ್ನು ಅಂತಿಮಗೊಳಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.
ಕಾವೇರಿ ವಿಚಾರಣೆ ಮುಂದೂಡಿಕೆ
ಇದೇ ವೇಳೆ ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ನಡೆಯಬೇಕಿದ್ದ ಪ್ರಮುಖ ವಿಚಾರಣೆ ಮುಂದಿನ ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ. ಈ ಕಾನೂನಾತ್ಮಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರೈತರ ಹಿತಾಸಕ್ತಿ ಮತ್ತು ಕುಡಿಯುವ ನೀರಿನ ಅಗತ್ಯತೆಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಹವಾಮಾನ ಪರಿಸ್ಥಿತಿ ಮತ್ತು ನೀರಿನ ಲಭ್ಯತೆಯನ್ನು ಹಗಲಿರುಳು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಸಚಿವ ಚಲುವರಾಯಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…