ರಾಜ್ಯ

ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಕ್ಷಮೆಯಾಚಿಸಿದ ಅರವಿಂದ್‌ ಬೆಲ್ಲದ್‌

ಬೆಂಗಳೂರು: ಜಿಂದಾಲ್‌ ಅವರಿಗೆ ಸರ್ಕಾರದ ವತಿಯಿಂದ ಭೂಮಿ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ಅವರು ಈಗ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಸಿಎಂಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ಕ್ಷಮೆ ಕೇಳಿದ್ದಾರೆ.

ಧಾರವಾಡದಲ್ಲಿ ಮಾತಮಾಡಿದ ಅರವಿಂದ್‌ ಬೆಲ್ಲದ್‌, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್‌ ಬೆಲ್ಲದ್‌ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.

ನಾನು ಬಳಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಸಿಎಂ ಸಿದ್ದರಾಮಯ್ಯರ ಬಳಿ ಕ್ಷಮೆ ಹೇಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಜಿಂದಾಲ್‌ಗೆ ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಬೆಲ್ಲದ್‌ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

36 mins ago

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

55 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

1 hour ago

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…

2 hours ago

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…

2 hours ago

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

2 hours ago