ಬೆಂಗಳೂರು: ಜಿಂದಾಲ್ ಅವರಿಗೆ ಸರ್ಕಾರದ ವತಿಯಿಂದ ಭೂಮಿ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರು ಈಗ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಸಿಎಂಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ.
ಧಾರವಾಡದಲ್ಲಿ ಮಾತಮಾಡಿದ ಅರವಿಂದ್ ಬೆಲ್ಲದ್, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.
ನಾನು ಬಳಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಸಿಎಂ ಸಿದ್ದರಾಮಯ್ಯರ ಬಳಿ ಕ್ಷಮೆ ಹೇಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಜಿಂದಾಲ್ಗೆ ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಬೆಲ್ಲದ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…