ರಾಜ್ಯ

ಅರವಿಂದ ಕೇಜ್ರಿವಾಲ್‌ಗೆ ಹುಚ್ಚು ಹಿಡಿದಿದೆ : ಆರ್‌.ಅಶೋಕ

ಬೆಂಗಳೂರು :  ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಟಿಕೆಟ್‌ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್‌ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದರು.

ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್‌ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು.

ವಿಧಾನಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್‌ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದರು.

ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿಸಿದ ಆರ್.ಅಶೋಕ :  ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ವಿಚಾರಿಸಿದರು.

ಈ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ. ನಾವು ಕೂಡ ಅವರ ಆರೋಗ್ಯಕ್ಕೆ ಪ್ರಾರ್ಥಿಸುತ್ತೇವೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 mins ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

15 mins ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

22 mins ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

1 hour ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

1 hour ago

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

2 hours ago