ರಾಜ್ಯ

ಅರವಿಂದ ಕೇಜ್ರಿವಾಲ್‌ಗೆ ಹುಚ್ಚು ಹಿಡಿದಿದೆ : ಆರ್‌.ಅಶೋಕ

ಬೆಂಗಳೂರು :  ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಟಿಕೆಟ್‌ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್‌ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದರು.

ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್‌ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು.

ವಿಧಾನಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್‌ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದರು.

ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿಸಿದ ಆರ್.ಅಶೋಕ :  ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ವಿಚಾರಿಸಿದರು.

ಈ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ. ನಾವು ಕೂಡ ಅವರ ಆರೋಗ್ಯಕ್ಕೆ ಪ್ರಾರ್ಥಿಸುತ್ತೇವೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

4 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

17 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago