ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇಂದು ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಈ ಸಾಲಿನ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ 1 ಸಾವಿರ ರೂ. ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂ. ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಸಚಿವೆ, 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅಗಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರೂ.ಗಳ ಗೌರವ ಧನ ಹೆಚ್ಚಳ ಮಾಡಿದ್ದರು. ಆದರೆ, ಬಿಜೆಪಿ ಸರ್ಕಾರ ತಮ್ಮ 4 ವರ್ಷದ ಅವಧಿಯಲ್ಲಿ ಒಂದೂ ರೂಪಾಯಿ ಹೆಚ್ಚಿಸಿರಲಿಲ್ಲ ಎಂದು ಸದನಕ್ಕೆ ತಿಳಿಸದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದೆ. ಅದರಲ್ಲಿ ನಮ್ಮ ರಾಜ್ಯದ ಪಾಲು ಹೆಚ್ಚಿದೆ. ಗೌರವ ಧನ ಹೆಚ್ಚಳದ ಬಗ್ಗೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದರು, ಇದುವರೆಗೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೆ ನಮ್ಮ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಬದ್ಧತೆ ಇರುವ ಕಾರಣ ಗೌರವ ಧನ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸದನಕ್ಕೆ ತಿಳಿಸಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…