ರಾಜ್ಯ

ಬಾಣಂತಿಯರ ಸಾವು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲು ಅಶೋಕ್‌ ಆಗ್ರಹ

ಡಿಸೆಂಬರ್‌: ಪಶ್ಚಿಮ ಬಂಗಾ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯ ಐವಿ ದ್ರಾವಣ ಕಳಪೆ ಎಂದು ಆರು ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೂ, ಅದನ್ನೇ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಬಲಾಢ್ಯರ ಕಾಣದ ಕೈ ಕೆಲಸ ಮಾಡಿದೆ. ಈ ಸಾವುಗಳಿಗೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 10 ತಿಂಗಳಲ್ಲಿ 111 ನವಜಾತ ಶಿಶುಗಳು ಸಾವನ್ನಪ್ಪಿವೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ತಾಯಂದಿರು ಹೆರಿಗೆ ನಂತರ ಮೃತರಾಗಿದ್ದಾರೆ. ಈಗ ಜನರಲ್ಲಿ ಭಯದ ವಾತಾವರಣವಿದೆ. ಹಾಗೆಯೇ ಇಲ್ಲಿ ಮೆಡಿಕಲ್‌ ಮಾಫಿಯಾ ಕೂಡ ಇದೆ. ಇದು ಒಂದು ಜಿಲ್ಲೆಯಲ್ಲಿ ಕಂಡುಬಂದ ಸಮಸ್ಯೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಏನಾಗಿದೆ ಎಂಬುದನ್ನು ನೋಡಬೇಕಿದೆ. ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಇಲ್ಲವಾದರೆ ನಾನೇ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಎಂದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವಿ ದ್ರಾವಣ ನೀಡಿದ ಬಳಿಕ ತಾಯಂದಿರ ಲಿವರ್‌ ವಿಫಲವಾಗಿದೆ. ರಕ್ತದೊತ್ತಡ ಸಂಪೂರ್ಣ ಇಳಿಮುಖವಾಗಿದೆ. ಈ ದ್ರಾವಣ ಯಾರ ಪ್ರಭಾವದಿಂದ ಕರ್ನಾಟಕಕ್ಕೆ ಬಂತು ಎಂದು ನೋಡಬೇಕಿದೆ. ಹಿಂದೆ ಇದ್ದ ಡ್ರಗ್‌ ಕಂಟ್ರೋಲರ್‌ ಆರು ತಿಂಗಳ ಹಿಂದೆ ಐವಿ ದ್ರಾವಣ ಖರೀದಿಸಬಾರದು ಎಂದು ಸರ್ಕಾರಕ್ಕೆ ತಿಳಿಸಿದ್ದರು. ಬಳಸಬಾರದು ಎಂದು ಹೇಳಿದ್ದರೂ ಯಾವ ಕಾಣದ ಬಲಾಢ್ಯ ಕೈ ಇದನ್ನೇ ಖರೀದಿ ಮಾಡಬೇಕೆಂದು ಪ್ರಭಾವ ಬೀರಿದೆ ಎಂದು ನೋಡಬೇಕಿದೆ. ಈ ಕಂಪನಿಯ ಅನ್ಸಾರಿ ಎಂಬುವರು ಇಲ್ಲಿ ಪ್ರಭಾವ ಬೀರಿದ್ದು, ಈತನನ್ನು ಬಂಧಿಸಿದರೆ ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬಹುದು ಎಂದರು.

ಎರಡು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿ ನುಣುಚಿಕೊಂಡಿದೆ. ಸಚಿವರೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕಳಪೆ ದ್ರಾವಣ

ಅಧಿಕಾರಿಗಳಾದ ಚಿದಾನಂದ ವಟಾರೆ, ರಘುನಂದನ್‌, ನಂದಿನಿ, ಶೈಲಾವತಿ ಇದನ್ನು ಶಿಫಾರಸು ಮಾಡಿದ್ದಾರೆ. 97 ಬ್ಯಾಚ್‌ಗಳಲ್ಲಿ 23 ಬ್ಯಾಚ್‌ಗಳು ಕಳಪೆ ಗುಣಮಟ್ಟ ಹೊಂದಿವೆ ಎಂದು ವರದಿ ನೀಡಲಾಗಿದೆ. ಔಷಧಿಯಲ್ಲಿ ಶೇ.1 ರಷ್ಟು ಕಳಪೆ ಇದ್ದರೂ ಅದು ರೋಗಿಗಳಿಗೆ ಅಪಾಯ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಕಳಪೆ ಔಷಧಿ ಇದ್ದರೂ ಅದನ್ನು ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಸರ್ಕಾರವೇ ಇದೆ. ಈ ಸಾವುಗಳಿಗೆ ಯಾರು ನ್ಯಾಯ ನೀಡುತ್ತಾರೆ ಎಂದು ಪ್ರಶ್ನಿಸಿದರು.

ಇದು ವೈದ್ಯರ ಲೋಪವಲ್ಲ. ಈ ದ್ರಾವಣ ನೀಡಿದ ನಂತರ ತಾಯಂದಿರ ಅಂಗಾಂಗ ವೈಫಲ್ಯವಾಗಿದೆ. ಸರ್ಕಾರವೇ ಬಾಳಂತಿಯರನ್ನು ಕೊಲ್ಲುವ ಕೆಲಸ ಮಾಡಿದ್ದು, ಇದು ಸಂಪೂರ್ಣವಾಗಿ ಸರ್ಕಾರದ್ದೇ ತಪ್ಪು. ಬಾಳಂತಿಯರಿಗೆ ಸಾವಿನ ಭಾಗ್ಯ ನೀಡಿದ ಕಾಂಗ್ರೆಸ್‌, ಹಾಸನದಲ್ಲಿ ಸಮಾವೇಶ ಮಾಡಲು ಮುಂದಾಗಿದೆ. ಖಜಾನೆ ಖಾಲಿ ಮಾತ್ರವಲ್ಲ, ಆಸ್ಪತ್ರೆಗಳಲ್ಲಿ ಔಷಧಿ ಕೂಡ ಖಾಲಿಯಾಗಿದೆ ಎಂದು ದೂರಿದರು.

ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ. ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಕಾಣೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿಗೆ ಬಂದರೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಾತ್ರ ಇವರ ಕಾರ್ಯಕ್ರಮ ಎಂದರು.

25 ಲಕ್ಷ ರೂ. ಪರಿಹಾರ ಕೊಡಿ

ರಾಜ್ಯ ಸರ್ಕಾರ ಮೃತ ಬಾಳಂತಿಯರಿಗೆ 2 ಲಕ್ಷ ರೂ. ಪರಿಹಾರ ನೀಡಿದೆ. ಸರ್ಕಾರಕ್ಕೆ ಜೀವದ ಬೆಲೆ ಗೊತ್ತಿಲ್ಲ. ಮೃತಪಟ್ಟ ಪ್ರತಿ ಸಂತ್ರಸ್ತರಿಗೂ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

16 mins ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

36 mins ago

ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…

57 mins ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

1 hour ago

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…

2 hours ago

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…

2 hours ago