priyanka kharghe
ಬೆಂಗಳೂರು : ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಸ್ವಪಕ್ಷದವರು ವಿರೋಧಿಸುವ ನಾಯಕರಾಗಿದ್ದಾರೆಯೇ! ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರು ಮೆಟ್ರೋ ಫೇಸ್-2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೇ ವೇದಿಕೆಯಲ್ಲಿ ಜಾಗ ನೀಡುವುದನ್ನು ನಿರಾಕರಿಸಿದೆ. ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ? ಮೊದಲ ಬಾರಿ ಶಾಸಕರಾಗಿರುವ ಹಾಗೂ ಬೆಂಗಳೂರಿನ ಶಾಸಕರಲ್ಲದಿರುವ ಬಿ.ವೈ.ವಿಜಯೇಂದ್ರ ಅವರಿಗೆ ಸಿಕ್ಕ ಅವಕಾಶ ಅಶೋಕ್ ಅವರಿಗೆ ಏಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಛೇಡಿಸಿದ್ದಾರೆ.
ಅಶೋಕ್ ಅವರೇ, ತಾವು ಬೆಂಗಳೂರು ನಗರವನ್ನು ಪ್ರತಿನಿಧಿಸಿರುವ ಶಾಸಕರಾಗಿದ್ದರೂ, ಜೊತೆಗೆ ವಿರೋಧ ಪಕ್ಷದ ನಾಯಕರಾಗಿದ್ದರೂ, ಬಿಜೆಪಿ ಪಕ್ಷದ ಹಿರಿಯ ನಾಯಕ ಎನಿಸಿಕೊಂಡಿದ್ದರೂ, ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ನಿಮ್ಮನ್ನು ಕಡೆಗಣಿಸಲಾಗಿದೆ ಎಂದರೆ ನಿಮ್ಮ ಕುರ್ಚಿ ಕಿತ್ತುಕೊಳ್ಳುವ ಸಂದೇಶ ಬಂದಿದೆ ಎಂದು ಭಾವಿಸೋಣವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದ್ದಾರೆ.
ಯಾರು ಯಾರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿಲ್ಲ ಎಂದು ತಲೆಕೆಡಿಸಿಕೊಂಡು ಕುಳಿತಿದ್ದ ತಮಗೆ ಈಗ “ನನಗೇಕೆ ಆಹ್ವಾನವಿಲ್ಲ” ಎಂದು ತಲೆಕೆಡಿಸಿಕೊಂಡು ಕೂರುವ ಸಮಯ ಬಂದಿದೆ. ಇನ್ನಾದರೂ ಇತರರ ಮನೆ ಇಣುಕುವ ಬದಲು ನಿಮ್ಮ ಬುಡ ಅಲ್ಲಾಡುತ್ತಿರುವುದನ್ನು ಗಮನಿಸಿದರೆ ಒಳ್ಳೆಯದು! ಎಂಬ ಸಲಹೆಯನ್ನೂ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿರೋಧ ಪಕ್ಷದ ನಾಯಕರಿಗೆ ನೀಡಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…