ರಾಜ್ಯ

ಮೆಟ್ರೋ ಫೇಸ್-2 ಉದ್ಘಾಟನೆಗೆ ಅಶೋಕ್‌ʼಗಿಲ್ಲ ಆಹ್ವಾನ! ; ಇದು ಕುರ್ಚಿ ಕಿತ್ತುಕೊಳ್ಳುವ ಸಂದೇಶವೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು : ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಸ್ವಪಕ್ಷದವರು ವಿರೋಧಿಸುವ ನಾಯಕರಾಗಿದ್ದಾರೆಯೇ! ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರು ಮೆಟ್ರೋ ಫೇಸ್-2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೇ ವೇದಿಕೆಯಲ್ಲಿ ಜಾಗ ನೀಡುವುದನ್ನು ನಿರಾಕರಿಸಿದೆ. ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ? ಮೊದಲ ಬಾರಿ ಶಾಸಕರಾಗಿರುವ ಹಾಗೂ ಬೆಂಗಳೂರಿನ ಶಾಸಕರಲ್ಲದಿರುವ ಬಿ.ವೈ.ವಿಜಯೇಂದ್ರ ಅವರಿಗೆ ಸಿಕ್ಕ ಅವಕಾಶ ಅಶೋಕ್ ಅವರಿಗೆ ಏಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಛೇಡಿಸಿದ್ದಾರೆ.

ಅಶೋಕ್ ಅವರೇ, ತಾವು ಬೆಂಗಳೂರು ನಗರವನ್ನು ಪ್ರತಿನಿಧಿಸಿರುವ ಶಾಸಕರಾಗಿದ್ದರೂ, ಜೊತೆಗೆ ವಿರೋಧ ಪಕ್ಷದ ನಾಯಕರಾಗಿದ್ದರೂ, ಬಿಜೆಪಿ ಪಕ್ಷದ ಹಿರಿಯ ನಾಯಕ ಎನಿಸಿಕೊಂಡಿದ್ದರೂ, ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ನಿಮ್ಮನ್ನು ಕಡೆಗಣಿಸಲಾಗಿದೆ ಎಂದರೆ ನಿಮ್ಮ ಕುರ್ಚಿ ಕಿತ್ತುಕೊಳ್ಳುವ ಸಂದೇಶ ಬಂದಿದೆ ಎಂದು ಭಾವಿಸೋಣವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದ್ದಾರೆ.

ಯಾರು ಯಾರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿಲ್ಲ ಎಂದು ತಲೆಕೆಡಿಸಿಕೊಂಡು ಕುಳಿತಿದ್ದ ತಮಗೆ ಈಗ “ನನಗೇಕೆ ಆಹ್ವಾನವಿಲ್ಲ” ಎಂದು ತಲೆಕೆಡಿಸಿಕೊಂಡು ಕೂರುವ ಸಮಯ ಬಂದಿದೆ. ಇನ್ನಾದರೂ ಇತರರ ಮನೆ ಇಣುಕುವ ಬದಲು ನಿಮ್ಮ ಬುಡ ಅಲ್ಲಾಡುತ್ತಿರುವುದನ್ನು ಗಮನಿಸಿದರೆ ಒಳ್ಳೆಯದು! ಎಂಬ ಸಲಹೆಯನ್ನೂ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿರೋಧ ಪಕ್ಷದ ನಾಯಕರಿಗೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

6 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

7 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

8 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

8 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 hours ago