ರಾಜ್ಯ

ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನದ ಭವಿಷ್ಯ ನುಡಿದ ಅಶೋಕ್

ಶಿವಮೊಗ್ಗ:  ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್‌ ಅವರ ಆತ್ಮಹತ್ಯೆ ಸಂಬಂಧ ಬಿಜೆಪಿ ಮೃತರ ಕುಟುಂಕ್ಕೆ ನ್ಯಾಯ ಕೊಡಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜೀನಾಮೆ ಕೊಡಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಅವರು ಇಂದು(ಮೇ.31 ) ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬದವರನ್ನು  ಭೇಟಿಯಾಗಿ ಸಾಂತ್ವನ ಹೇಳಿ, ಸರಕಾರದ ಮೊದಲ ವಿಕೆಟ್ ಪತನ ಖಚಿತ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಕುಟುಂಬ ಬೀದಿಗೆ ಬಂದಿದೆ. ಯಾವುದೇ ಹಿರಿಯ ಅಧಿಕಾರಿಗಳು, ಗೃಹ ಸಚಿವರು ಮೃತರ ಕುಟುಂಬಕ್ಕೆ ನೆರವು ನೀಡಿಲ್ಲ. 1 ಕೋಟಿ ರೂ. ಗೂ ಅಧಿಕ ಅಕ್ರಮ ನಡೆದಾಗ ಅದು ಸಿಬಿಐ ತನಿಖೆಗೆ ಒಳಪಡುತ್ತದೆ. ಬ್ಯಾಂಕ್‌ನವರು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ. ಇದು ಸಿಬಿಐಗೆ ಹೋಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಯದಿಂದಾಗಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರು ಹಾಗೂ ಮುಖ್ಯಮಂತ್ರಿಯ ಬೆಂಬಲವಿಲ್ಲದೆ ಇಂತಹ ಅವ್ಯವಹಾರ ನಡೆಯಲು ಸಾಧ್ಯವಿಲ್ಲ. ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು.

ಗೃಹ ಸಚಿವರಿಗೆ ಹಿಡಿತವಿಲ್ಲ

ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಇಲಾಖೆಯಲ್ಲಿ ಆಸಕ್ತಿಯೂ ಇಲ್ಲ, ಹಿಡಿತವೂ ಇಲ್ಲ. ಗೃಹ ಇಲಾಖೆಯನ್ನು ಸಿಎಂ, ಡಿಸಿಎಂ ಮತ್ತು ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ವಹಣೆ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಮಾನ ಮರ್ಯಾದೆ ಉಳಿಯಬೇಕೆಂದರೆ ಅವರಾಗಿಯೇ ಸಿಬಿಐ ತನಿಖೆಗೆ ವಹಿಸುವುದು ಉತ್ತಮ. ಕಾಂಗ್ರೆಸ್‌ನ ಕೆ.ಜೆ.ಜಾರ್ಜ್‌ ಅವರಿಗೆ ಸಿಬಿಐ ಕ್ಲೀನ್‌ ಚಿಟ್‌ ನೀಡಿತ್ತು. ತಪ್ಪಿತಸ್ಥರಲ್ಲವೆಂದರೆ ಕ್ಲೀನ್‌ ಚಿಟ್‌ ಸಿಗುತ್ತದೆ. ಇದು ಬಡವರ ಹಣವಾಗಿದ್ದು, ವಾಲ್ಮೀಕಿ ಸಮುದಾಯವರಿಗೆ ಸಾಲ ನೀಡಲು ಈ ಹಣ ಬಳಕೆಯಾಗುತ್ತಿತ್ತು. ಈಗ ಸರ್ಕಾರ ಎಲ್ಲ ಬಗೆಯ ಸಾಲಗಳನ್ನು ಸ್ಥಗಿತಗೊಳಿಸಿದೆ ಎಂಬ ಸುದ್ದಿ ಬಂದಿದೆ. ಪರಿಶಿಷ್ಟ ಪಂಗಡದವರಿಗೆ ಈಗ ಸಾಲವೇ ಇಲ್ಲದೆ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಪಂಗಡದ ಜನರ ಬಗ್ಗೆ ಗೌರವವೇ ಇಲ್ಲ. ಗೌರವ ಇದ್ದರೆ ಸರಿಯಾದ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಮತ್ತೊಂದು ಆತ್ಮಹತ್ಯೆ

ಕೆಆರ್‌ಐಡಿಎಲ್‌ ಗುತ್ತಿಗೆದಾರ ಪಿ.ಸಿ.ಗೌಡರ್‌ ಅವರ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಈಗ ಉತ್ತರ ಹೇಳಬೇಕು. ಕೂಡಲೇ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆಗೆ ಎಸ್‌ಐಟಿ ರಚಿಸಬೇಕು. ಗುತ್ತಿಗೆದಾರರ ಬಾಕಿ ಪಾವತಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಕೆ.ಎಸ್‌.ಈಶ್ವರಪ್ಪನವರ ಪ್ರಕರಣದಲ್ಲಿ ರಸ್ತೆ ರಸ್ತೆಯಲ್ಲಿ ಕಾಂಗ್ರೆಸ್ಸಿಗರು ಬಾಯಿ ಬಡಿದುಕೊಂಡಿದ್ದರು. ಈಗ ಕಮಿಶನ್‌ಗಾಗಿ ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡುತ್ತಿಲ್ಲ. ಸಚಿವರು ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಬಿಡುವುದಿಲ್ಲ. ಕುಟುಂಬದವರಿಗೆ ನ್ಯಾಯ ಕೊಡಿಸಲು ಎಲ್ಲ ಬಗೆಯ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago