Mysore
24
scattered clouds

Social Media

ಗುರುವಾರ, 23 ಜುಲೈ 2026
Light
Dark

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಹಳ್ಳಿ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದ ಹೆಸರನ್ನು ಬದಲಾಯಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲ ತಾಣದಲ್ಲಿ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗುತ್ತದೆ ಎಂಬ ವದಂತಿ ಹಬ್ಬಿದೆ. ಇದನ್ನು ಯಾರೊಬ್ಬರು ನಂಬಬಾರದು ಎಂದು ಮನವಿ ಮಾಡಿದ್ದಾರೆ. ಈ ರೈಲ್ವೆ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಇಲಾಖೆಯ ಮುಂದೆ ಇಲ್ಲ ಹೇಳಿದ್ದಾರೆ.
ಮೈಸೂರಿಗೆ ಭೇಟಿ ನೀಡಿದ ವೇಳೆ, ಮಾಜಿ ಸಂಸದರಾದ ಪ್ರತಾಪ್ ಸಿಂಹರವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದು, ಈ ಕುರಿತು ಪರಿಶೀಲಿಸುವ ಭರವಸೆ ನೀಡಿದ್ದೇನೆ ಎಂದು ಸೋಮಣ್ಣ ತಿಳಿಸಿದ್ದಾರೆ.

Tags:
error: Content is protected !!