ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಹಳ್ಳಿ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದ ಹೆಸರನ್ನು ಬದಲಾಯಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲ ತಾಣದಲ್ಲಿ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗುತ್ತದೆ ಎಂಬ ವದಂತಿ ಹಬ್ಬಿದೆ. ಇದನ್ನು ಯಾರೊಬ್ಬರು ನಂಬಬಾರದು ಎಂದು ಮನವಿ ಮಾಡಿದ್ದಾರೆ. ಈ ರೈಲ್ವೆ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಇಲಾಖೆಯ ಮುಂದೆ ಇಲ್ಲ ಹೇಳಿದ್ದಾರೆ.
ಮೈಸೂರಿಗೆ ಭೇಟಿ ನೀಡಿದ ವೇಳೆ, ಮಾಜಿ ಸಂಸದರಾದ ಪ್ರತಾಪ್ ಸಿಂಹರವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದು, ಈ ಕುರಿತು ಪರಿಶೀಲಿಸುವ ಭರವಸೆ ನೀಡಿದ್ದೇನೆ ಎಂದು ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…