ರಾಜ್ಯ

ಗೋಮಾಂಸ ತಿನ್ನಲು, ಗೋವು ಹತ್ಯೆ ಮಾಡಲು ಅವಕಾಶ ನೀಡಬೇಕಾ?: ಅಶ್ವಥ್‌ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್‌ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.13) ನಿನ್ನೆ ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃತ್ಯದ ಹಿಂದೆ ಕೆಲ ಸಂಘಟನೆಗಳು ಇರಬಹುದು. ಆದರೆ ಕಾಂಗ್ರೆಸ್‌ನ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿ ಈ ರೀತಿಯಾಗುತ್ತದೆ. ಅವರು ಈ ರೀತಿ ಮಾಡಲು ಮಾನಸಿಕವಾಗಿ ಕೆಲ ವ್ಯಕ್ತಿಗಳಿಗೆ ಉತ್ತೇಜನ ನೀಡಿದ್ದಾರೆ. ಅಲ್ಲದೇ ಗೋಮಾಂಸ ಮತ್ತು ಗೋವುಗಳ ವಿಚಾರದಲ್ಲಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ಈ ವೇಳೆ ಗೋಮಾಂಸ ಮತ್ತು ಗೋವುಗಳ ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂಬುದನ್ನು ತಿಳಿಸಬೇಕು. ಕಾಂಗ್ರೆಸ್‌ ಸರ್ಕಾರ ಎಲ್ಲೋ ಒಂದು ಸಮುದಾಯದ ಜನರನ್ನು ಓಲೈಕೆ ಮಾಡುತ್ತಿದೆ ಎಂಬಂತೆ ಕಾಣುತ್ತಿದ್ದು, ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

16 mins ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

25 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

40 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago