Mysore
15
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ರಾಮನಗರ ಜಿಲ್ಲೆಗೆ ಮರು ನಾಮಕರಣ| ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾವನೆ ತಿರಸ್ಕಾರ ಗುಡ್‌ ನ್ಯೂಸ್‌: ಅಶ್ವಥ್‌ ನಾರಾಯಣ

ಬೆಂಗಳೂರು: ಕೇಂದ್ರ ಸರ್ಕಾರವೂ, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕಾರ ಮಾಡಿರುವುದು ಗುಡ್‌ ನ್ಯೂಸ್‌ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ರಿಯಲ್‌ ಎಸ್ಟೇಟ್‌ ಮಾಡುವ ಉದ್ದೇಶವಾಗಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸಿದೆ. ಏನೇ ಆಗಲಿ ನಮ್ಮ ರಾಜ್ಯದ ಈ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವುದು ಒಳ್ಳೆಯದೇ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ರಾಮನಗರ ಎಂಬ ಹೆಸರನ್ನು ಬದಲಾಯಿಸಬೇಕೆಂದು ಹೊರಟಿದ್ದು, ಆ ಜಿಲ್ಲೆಗೆ ಮಾಡಿದ ಅಪಮಾನವಾಗಿದೆ. ಇನ್ನು ರಾಮನಗರ ಜಿಲ್ಲೆ ಇದೇ ಹೆಸರಿನಲ್ಲಿ ಮುಂದುವರಿಯಬೇಕು ಎಂದರು.

Tags:
error: Content is protected !!