ರಾಜ್ಯ

ಸ್ಮಾರ್ಟ್‌ ಮೀಟ್‌ ಖರೀದಿ ಟೆಂಡರ್‌ನಲ್ಲ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ: ಅಶ್ವಥ್‌ ನಾರಾಯಣ್‌

ಬೆಂಗಳೂರು: ಬೆಸ್ಕಾಂ ಮತ್ತು ಎಸ್ಕಾಂಗಳ ಸ್ಮಾರ್ಟ್‌ ಮೀಟರ್‌ ಖರೀದಿ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಮೊತ್ತದ ಹಗರಣ ನಡೆದಿದ್ದು, ಇದು ರಾಜ್ಯದ ಅತಿ ದೊಡ್ಡ ಹಗರಣವಾಗಿದೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ್‌ ಆರೋಪಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಮಾರ್ಚ್.‌25) ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಮಾರ್ಟ್ ಮೀಟರ್ ಹಗರಣ ಆರೋಪ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅನೇಕ ವಿಚಾರಗಳಲ್ಲಿ ಅವ್ಯವಹಾರ ನಡೆಸಿದೆ. ಅದರಲ್ಲಿ ಸ್ಮಾರ್ಟ್ ಮೀಟರ್‌ಗಳ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಸದನದಲ್ಲಿ ಈ ಬಗ್ಗೆ ನಾನು ಮತ್ತು ವಿಶ್ವನಾಥ್‌ ಇಬ್ಬರೂ ಕೂಡ ಚರ್ಚಿಸಿದ್ದೇವೆ. ಅಲ್ಲದೇ ಈ ಆರೋಪಕ್ಕೆ ಸದನದಲ್ಲೇ ಉತ್ತರ ನೀಡುತ್ತೇನೆಂದು ಇಂಧನ ಸಚಿವರು ತಿಳಿಸಿದ್ದರು. ಆದರೆ ಆ ದಿನ ಸದನಕ್ಕೆ ಬಂದಿದ್ದರೂ ಸಹ ನಾಪತ್ತೆಯಾಗಿದ್ದರೂ ಎಂದು ಹೇಳಿದರು.

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯನಾ? ಕೆಇಆರ್‌ಸಿ ಗೈಡ್‌ಲೈನ್ಸ್ ಪ್ರಕಾರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ತಾತ್ಕಾಲಿಕ ಗ್ರಾಹಕರಿಗೆ ಮಾತ್ರ ಕಡ್ಡಾಯ ಮಾಡಬಹುದೇ ಹೊರತು ಹೊಸ ಗ್ರಾಹಕರಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೇ ಸ್ಮಾರ್ಟ್ಮೀಟರ್‌ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದೆ ಎಂದರು.

ರಾಜಶ್ರೀ ಕಂಪನಿಗೆ ಅನುಕೂಲ ಆಗುವಂತೆ ಟೆಂಡರ್ ನೀಡಿದ್ದಾರೆ. ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್ ಪಡೆದುಕೊಳ್ಳುವ ಸಂಸ್ಥೆಯ ಬಳಿ 6,800 ಕೋಟಿ ರೂ. ಬಿಡ್ ಸಾಮರ್ಥ್ಯ ಮೊತ್ತ ಇರಬೇಕು. ಟೆಂಡರ್ ಪಡೆದ ರಾಜಶ್ರೀ ಕಂಪನಿ ಬಳಿ ಇದ್ದಿದ್ದು ಕೇವಲ 400 ಕೋಟಿ ರೂ. ಟೆಂಡರ್ ಮೌಲ್ಯ 1,920 ಕೋಟಿ ಇರಬೇಕಿತ್ತು. ಟೆಂಡರ್‌ನಲ್ಲಿ ಇದಿದ್ದು ಕೇವಲ 107 ಕೋಟಿ ರೂ. ಅಷ್ಟೇ. ಹೀಗಿದ್ದರೂ ಬ್ಲಾಕ್‌ಲಿಸ್ಟ್ನಲ್ಲಿರುವ ಯಾವುದೇ ಸಂಸ್ಥೆಗೆ ಟೆಂಡರ್ ನೀಡುವಂತಿಲ್ಲವೆಂದು ಕೆಟಿಪಿಪಿ ಕಾಯ್ದೆಯಲ್ಲಿದೆ. ಆದರೆ ರಾಜ್ಯ ಸರ್ಕಾರ, ಉತ್ತರ ಪ್ರದೇಶದಲ್ಲಿ ಬ್ಲಾಕ್‌ಲಿಸ್ಟ್ ಆಗಿರುವ ಬಿಸಿಐಟಿಎಸ್ ಕಂಪನಿಗೆ ಸಾಫ್ಟ್‌ವೇರ್‌ ಟೆಂಡರ್ ನೀಡಿದ್ದಾರೆ. ಹೀಗಾಗಿ ಈಗ ಇರುವ ಟೆಂಡರ್‌ ರದ್ದು ಮಾಡಿ ನಿಯಾಮಾನುಸಾರ ಟೆಂಡರ್‌ ಕರೆಯಬೇಕು ಎಂದು ಆಗ್ರಹಿಸಿದರು.

 

 

ಅರ್ಚನ ಎಸ್‌ ಎಸ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

5 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

5 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

5 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

5 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

5 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

6 hours ago