ರಾಜ್ಯ

ಸ್ಮಾರ್ಟ್‌ ಮೀಟ್‌ ಖರೀದಿ ಟೆಂಡರ್‌ನಲ್ಲ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ: ಅಶ್ವಥ್‌ ನಾರಾಯಣ್‌

ಬೆಂಗಳೂರು: ಬೆಸ್ಕಾಂ ಮತ್ತು ಎಸ್ಕಾಂಗಳ ಸ್ಮಾರ್ಟ್‌ ಮೀಟರ್‌ ಖರೀದಿ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಮೊತ್ತದ ಹಗರಣ ನಡೆದಿದ್ದು, ಇದು ರಾಜ್ಯದ ಅತಿ ದೊಡ್ಡ ಹಗರಣವಾಗಿದೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ್‌ ಆರೋಪಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಮಾರ್ಚ್.‌25) ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಮಾರ್ಟ್ ಮೀಟರ್ ಹಗರಣ ಆರೋಪ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅನೇಕ ವಿಚಾರಗಳಲ್ಲಿ ಅವ್ಯವಹಾರ ನಡೆಸಿದೆ. ಅದರಲ್ಲಿ ಸ್ಮಾರ್ಟ್ ಮೀಟರ್‌ಗಳ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಸದನದಲ್ಲಿ ಈ ಬಗ್ಗೆ ನಾನು ಮತ್ತು ವಿಶ್ವನಾಥ್‌ ಇಬ್ಬರೂ ಕೂಡ ಚರ್ಚಿಸಿದ್ದೇವೆ. ಅಲ್ಲದೇ ಈ ಆರೋಪಕ್ಕೆ ಸದನದಲ್ಲೇ ಉತ್ತರ ನೀಡುತ್ತೇನೆಂದು ಇಂಧನ ಸಚಿವರು ತಿಳಿಸಿದ್ದರು. ಆದರೆ ಆ ದಿನ ಸದನಕ್ಕೆ ಬಂದಿದ್ದರೂ ಸಹ ನಾಪತ್ತೆಯಾಗಿದ್ದರೂ ಎಂದು ಹೇಳಿದರು.

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯನಾ? ಕೆಇಆರ್‌ಸಿ ಗೈಡ್‌ಲೈನ್ಸ್ ಪ್ರಕಾರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ತಾತ್ಕಾಲಿಕ ಗ್ರಾಹಕರಿಗೆ ಮಾತ್ರ ಕಡ್ಡಾಯ ಮಾಡಬಹುದೇ ಹೊರತು ಹೊಸ ಗ್ರಾಹಕರಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೇ ಸ್ಮಾರ್ಟ್ಮೀಟರ್‌ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದೆ ಎಂದರು.

ರಾಜಶ್ರೀ ಕಂಪನಿಗೆ ಅನುಕೂಲ ಆಗುವಂತೆ ಟೆಂಡರ್ ನೀಡಿದ್ದಾರೆ. ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್ ಪಡೆದುಕೊಳ್ಳುವ ಸಂಸ್ಥೆಯ ಬಳಿ 6,800 ಕೋಟಿ ರೂ. ಬಿಡ್ ಸಾಮರ್ಥ್ಯ ಮೊತ್ತ ಇರಬೇಕು. ಟೆಂಡರ್ ಪಡೆದ ರಾಜಶ್ರೀ ಕಂಪನಿ ಬಳಿ ಇದ್ದಿದ್ದು ಕೇವಲ 400 ಕೋಟಿ ರೂ. ಟೆಂಡರ್ ಮೌಲ್ಯ 1,920 ಕೋಟಿ ಇರಬೇಕಿತ್ತು. ಟೆಂಡರ್‌ನಲ್ಲಿ ಇದಿದ್ದು ಕೇವಲ 107 ಕೋಟಿ ರೂ. ಅಷ್ಟೇ. ಹೀಗಿದ್ದರೂ ಬ್ಲಾಕ್‌ಲಿಸ್ಟ್ನಲ್ಲಿರುವ ಯಾವುದೇ ಸಂಸ್ಥೆಗೆ ಟೆಂಡರ್ ನೀಡುವಂತಿಲ್ಲವೆಂದು ಕೆಟಿಪಿಪಿ ಕಾಯ್ದೆಯಲ್ಲಿದೆ. ಆದರೆ ರಾಜ್ಯ ಸರ್ಕಾರ, ಉತ್ತರ ಪ್ರದೇಶದಲ್ಲಿ ಬ್ಲಾಕ್‌ಲಿಸ್ಟ್ ಆಗಿರುವ ಬಿಸಿಐಟಿಎಸ್ ಕಂಪನಿಗೆ ಸಾಫ್ಟ್‌ವೇರ್‌ ಟೆಂಡರ್ ನೀಡಿದ್ದಾರೆ. ಹೀಗಾಗಿ ಈಗ ಇರುವ ಟೆಂಡರ್‌ ರದ್ದು ಮಾಡಿ ನಿಯಾಮಾನುಸಾರ ಟೆಂಡರ್‌ ಕರೆಯಬೇಕು ಎಂದು ಆಗ್ರಹಿಸಿದರು.

 

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago