ಬೆಂಗಳೂರು: ಕಂಬಳ ಕೆರೆ ಕಾರ್ಯಕ್ರಮಕ್ಕೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.
ಪ್ರಪ್ರಥಮ ಬಾರಿಗೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ನಡೆಯುತ್ತಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ ನ.25, 26 ಎರಡು ದಿನಗಳ ಕಾಲ ಪಂದ್ಯ ನಡೆಯಲಿದ್ದು ದೈವ, ದೇವರ ಪ್ರಸಾದ ಸಮರ್ಪಿಸುವ ಮೂಲಕ ಕಂಬಳ ಕೆರೆಯ ನೀರಿಗೆ ಪೂಜೆ ಸಲ್ಲಿಸಲಾಯಿತು.
೮ ಸಾವಿರ ಜನರ ಕೂತು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರ್ಯಾಕ್ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…