ಬೆಂಗಳೂರು: ಕಂಬಳ ಕೆರೆ ಕಾರ್ಯಕ್ರಮಕ್ಕೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.
ಪ್ರಪ್ರಥಮ ಬಾರಿಗೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ನಡೆಯುತ್ತಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ ನ.25, 26 ಎರಡು ದಿನಗಳ ಕಾಲ ಪಂದ್ಯ ನಡೆಯಲಿದ್ದು ದೈವ, ದೇವರ ಪ್ರಸಾದ ಸಮರ್ಪಿಸುವ ಮೂಲಕ ಕಂಬಳ ಕೆರೆಯ ನೀರಿಗೆ ಪೂಜೆ ಸಲ್ಲಿಸಲಾಯಿತು.
೮ ಸಾವಿರ ಜನರ ಕೂತು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರ್ಯಾಕ್ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…