ರಾಜ್ಯ

ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್‌

ಬೆಂಗಳೂರು: ಕಂಬಳ ಕೆರೆ ಕಾರ್ಯಕ್ರಮಕ್ಕೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.

ಪ್ರಪ್ರಥಮ ಬಾರಿಗೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ನಡೆಯುತ್ತಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ ನ.25, 26 ಎರಡು ದಿನಗಳ ಕಾಲ ಪಂದ್ಯ ನಡೆಯಲಿದ್ದು ದೈವ, ದೇವರ ಪ್ರಸಾದ ಸಮರ್ಪಿಸುವ ಮೂಲಕ ಕಂಬಳ ಕೆರೆಯ ನೀರಿಗೆ ಪೂಜೆ ಸಲ್ಲಿಸಲಾಯಿತು.
೮ ಸಾವಿರ ಜನರ ಕೂತು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್​ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರ್ಯಾಕ್‌ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

andolanait

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

34 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago