ರಾಜ್ಯ

ವಿಧಾನಸಭೆ ಕಲಾಪ: ಸಚಿವರ ಗೈರು, ಪ್ರತಿಪಕ್ಷಗಳಿಂದ ಕೆಲಕಾಲ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯ ಕಲಾಪ ಆರಂಭದಲ್ಲಿ ಮೊದಲ ಸಾಲಿನಲ್ಲಿ ಆಡಳಿತ ಪಕ್ಷದ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು.

ಗುರುವಾರ(ಜು.18)ಬೆಳಿಗ್ಗೆ ವಿಧಾಸಭೆ ಕಲಾಪ ಆರಂಭವಾದಾಗ ಕೂಡಲೇ ಎದ್ದು ನಿಂತ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಡಾ.ಸಿ.ಎನ್‌ ಅಶ್ವಸ್ಥನಾರಾಯಣ್‌ ಸಚಿವರಿಲ್ಲ ಎಂದು ಆಕ್ಷೇಪವೆತ್ತಿದರು.

ಕಲಾಪದ ಮೊದಲ ಸಾಲಿನಲ್ಲಿ ಯಾವ ಸಚಿವರು ಇಲ್ಲ. ಶೂನ್ಯವಿದೆ. ನವೆಲ್ಲಾ ಸರಿಯಾದ ಸಮಯಕ್ಕೆ ಬಂದಿದ್ದೇವೆ. ಅಧಿವೇಶನ ಚೆನ್ನಾಗಿ ನಡೆಯಬೇಕು ಎಂದು ಹೊಸ ನಿಯಮ ಜಾರಿಗೆ ತಂದಿದ್ದೀರಿ. ಆದರೆ ಆಡಳಿತ ಪಕ್ಷದ ಸಚಿವರೇ ಬಂದಿಲ್ಲ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು.

ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ನಾವು ಮೂರ್ನಾಲ್ಕು ಸಚಿವರಿದ್ದೇವೆ. ಅವರು ಚರ್ಚೆ ಮಾಡಲಿ. ಸರ್ಕಾರ ಉತ್ತರ ನೀಡುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್‌, ಅಧಿವೇಶನಕ್ಕಾಗಿ ಕೋಟ್ಯಂತರ ರೂ ಖರ್ಚಾಗುತ್ತದೆ. ಶಾಸಕರಿಗೆ ಊಟ, ತಿಂಡಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ಏನು ದಾಡಿ ಬಂದಿದೆ. ಬೇಜವಾಬ್ದಾರಿಯಿಂದ ಸರ್ಕಾರ ನಡೆದುಕೊಳ್ಳುತ್ತಿದೆ. ಇದನ್ನು ಪ್ರತಿಭಟಿಸಿ ನಾವು ಸಭಾತ್ಯಾಗ ಮಾಡುತ್ತೇನೆ ಎಂದು ಹೇಳಿ ಹೊರನಡೆದರು. ಈ ವೇಳೆ ಜೆಡಿಎಸ್‌ ಶಾಸಕರು ಕೂಡ ಅವರನ್ನು ಹಿಂಬಾಲಿಸಿ ಸದನದಿಂದ ಹೊರನಡೆದರು.

ನಂತರ ಸಭಾಧ್ಯಕ್ಷರು ಮಾತನಾಡಿ, ಸುಗಮ ಕಲಾಪ ಆಗಬೇಕು. ಏನೇ ಕೆಲಸವಿದ್ದರೂ ಸಕಲಾಕ್ಕೆ ಸದನಕ್ಕೆ ಹಾಜರಾಗುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಎಲ್ಲರಲ್ಲೂ ಮನಃ ಪರಿವರ್ತನೆಯಾಗಬೇಕು. ಮಂಗಳವಾರ ಸದನಕ್ಕೆ ಬೇಗ ಬಂದ ಶಾಸಕರು ಹೆಸರು ಉಲ್ಲೇಖಿಸಿ ರೈತನಿಗೆ ಮಾಲ್‌ನಲ್ಲಿ ಅಪಮಾನ ಮಾಡಿದ ವಿಚಾರವನ್ನು ಪ್ರಸ್ತಾಪಿಸಲು ಸಭಾಧ್ಯಕ್ಷರು ಮುಂದಾದರು. ಅಷ್ಟರಲ್ಲಿ ವಿರೋಧಪಕ್ಷದ ಶಾಸಕರು ಸದನಕ್ಕೆ ಆಗಮಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

32 mins ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

37 mins ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

8 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

8 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

8 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

8 hours ago