ರಾಜ್ಯ

ವಿಧಾನಸಭೆ ಕಲಾಪ: ಸಚಿವರ ಗೈರು, ಪ್ರತಿಪಕ್ಷಗಳಿಂದ ಕೆಲಕಾಲ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯ ಕಲಾಪ ಆರಂಭದಲ್ಲಿ ಮೊದಲ ಸಾಲಿನಲ್ಲಿ ಆಡಳಿತ ಪಕ್ಷದ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು.

ಗುರುವಾರ(ಜು.18)ಬೆಳಿಗ್ಗೆ ವಿಧಾಸಭೆ ಕಲಾಪ ಆರಂಭವಾದಾಗ ಕೂಡಲೇ ಎದ್ದು ನಿಂತ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಡಾ.ಸಿ.ಎನ್‌ ಅಶ್ವಸ್ಥನಾರಾಯಣ್‌ ಸಚಿವರಿಲ್ಲ ಎಂದು ಆಕ್ಷೇಪವೆತ್ತಿದರು.

ಕಲಾಪದ ಮೊದಲ ಸಾಲಿನಲ್ಲಿ ಯಾವ ಸಚಿವರು ಇಲ್ಲ. ಶೂನ್ಯವಿದೆ. ನವೆಲ್ಲಾ ಸರಿಯಾದ ಸಮಯಕ್ಕೆ ಬಂದಿದ್ದೇವೆ. ಅಧಿವೇಶನ ಚೆನ್ನಾಗಿ ನಡೆಯಬೇಕು ಎಂದು ಹೊಸ ನಿಯಮ ಜಾರಿಗೆ ತಂದಿದ್ದೀರಿ. ಆದರೆ ಆಡಳಿತ ಪಕ್ಷದ ಸಚಿವರೇ ಬಂದಿಲ್ಲ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು.

ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ನಾವು ಮೂರ್ನಾಲ್ಕು ಸಚಿವರಿದ್ದೇವೆ. ಅವರು ಚರ್ಚೆ ಮಾಡಲಿ. ಸರ್ಕಾರ ಉತ್ತರ ನೀಡುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್‌, ಅಧಿವೇಶನಕ್ಕಾಗಿ ಕೋಟ್ಯಂತರ ರೂ ಖರ್ಚಾಗುತ್ತದೆ. ಶಾಸಕರಿಗೆ ಊಟ, ತಿಂಡಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ಏನು ದಾಡಿ ಬಂದಿದೆ. ಬೇಜವಾಬ್ದಾರಿಯಿಂದ ಸರ್ಕಾರ ನಡೆದುಕೊಳ್ಳುತ್ತಿದೆ. ಇದನ್ನು ಪ್ರತಿಭಟಿಸಿ ನಾವು ಸಭಾತ್ಯಾಗ ಮಾಡುತ್ತೇನೆ ಎಂದು ಹೇಳಿ ಹೊರನಡೆದರು. ಈ ವೇಳೆ ಜೆಡಿಎಸ್‌ ಶಾಸಕರು ಕೂಡ ಅವರನ್ನು ಹಿಂಬಾಲಿಸಿ ಸದನದಿಂದ ಹೊರನಡೆದರು.

ನಂತರ ಸಭಾಧ್ಯಕ್ಷರು ಮಾತನಾಡಿ, ಸುಗಮ ಕಲಾಪ ಆಗಬೇಕು. ಏನೇ ಕೆಲಸವಿದ್ದರೂ ಸಕಲಾಕ್ಕೆ ಸದನಕ್ಕೆ ಹಾಜರಾಗುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಎಲ್ಲರಲ್ಲೂ ಮನಃ ಪರಿವರ್ತನೆಯಾಗಬೇಕು. ಮಂಗಳವಾರ ಸದನಕ್ಕೆ ಬೇಗ ಬಂದ ಶಾಸಕರು ಹೆಸರು ಉಲ್ಲೇಖಿಸಿ ರೈತನಿಗೆ ಮಾಲ್‌ನಲ್ಲಿ ಅಪಮಾನ ಮಾಡಿದ ವಿಚಾರವನ್ನು ಪ್ರಸ್ತಾಪಿಸಲು ಸಭಾಧ್ಯಕ್ಷರು ಮುಂದಾದರು. ಅಷ್ಟರಲ್ಲಿ ವಿರೋಧಪಕ್ಷದ ಶಾಸಕರು ಸದನಕ್ಕೆ ಆಗಮಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

54 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

23 hours ago