ರಾಜ್ಯ

ವಿಧಾನಸಭೆ ಕಲಾಪ: ಸಚಿವರ ಗೈರು, ಪ್ರತಿಪಕ್ಷಗಳಿಂದ ಕೆಲಕಾಲ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯ ಕಲಾಪ ಆರಂಭದಲ್ಲಿ ಮೊದಲ ಸಾಲಿನಲ್ಲಿ ಆಡಳಿತ ಪಕ್ಷದ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು.

ಗುರುವಾರ(ಜು.18)ಬೆಳಿಗ್ಗೆ ವಿಧಾಸಭೆ ಕಲಾಪ ಆರಂಭವಾದಾಗ ಕೂಡಲೇ ಎದ್ದು ನಿಂತ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಡಾ.ಸಿ.ಎನ್‌ ಅಶ್ವಸ್ಥನಾರಾಯಣ್‌ ಸಚಿವರಿಲ್ಲ ಎಂದು ಆಕ್ಷೇಪವೆತ್ತಿದರು.

ಕಲಾಪದ ಮೊದಲ ಸಾಲಿನಲ್ಲಿ ಯಾವ ಸಚಿವರು ಇಲ್ಲ. ಶೂನ್ಯವಿದೆ. ನವೆಲ್ಲಾ ಸರಿಯಾದ ಸಮಯಕ್ಕೆ ಬಂದಿದ್ದೇವೆ. ಅಧಿವೇಶನ ಚೆನ್ನಾಗಿ ನಡೆಯಬೇಕು ಎಂದು ಹೊಸ ನಿಯಮ ಜಾರಿಗೆ ತಂದಿದ್ದೀರಿ. ಆದರೆ ಆಡಳಿತ ಪಕ್ಷದ ಸಚಿವರೇ ಬಂದಿಲ್ಲ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು.

ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ನಾವು ಮೂರ್ನಾಲ್ಕು ಸಚಿವರಿದ್ದೇವೆ. ಅವರು ಚರ್ಚೆ ಮಾಡಲಿ. ಸರ್ಕಾರ ಉತ್ತರ ನೀಡುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್‌, ಅಧಿವೇಶನಕ್ಕಾಗಿ ಕೋಟ್ಯಂತರ ರೂ ಖರ್ಚಾಗುತ್ತದೆ. ಶಾಸಕರಿಗೆ ಊಟ, ತಿಂಡಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ಏನು ದಾಡಿ ಬಂದಿದೆ. ಬೇಜವಾಬ್ದಾರಿಯಿಂದ ಸರ್ಕಾರ ನಡೆದುಕೊಳ್ಳುತ್ತಿದೆ. ಇದನ್ನು ಪ್ರತಿಭಟಿಸಿ ನಾವು ಸಭಾತ್ಯಾಗ ಮಾಡುತ್ತೇನೆ ಎಂದು ಹೇಳಿ ಹೊರನಡೆದರು. ಈ ವೇಳೆ ಜೆಡಿಎಸ್‌ ಶಾಸಕರು ಕೂಡ ಅವರನ್ನು ಹಿಂಬಾಲಿಸಿ ಸದನದಿಂದ ಹೊರನಡೆದರು.

ನಂತರ ಸಭಾಧ್ಯಕ್ಷರು ಮಾತನಾಡಿ, ಸುಗಮ ಕಲಾಪ ಆಗಬೇಕು. ಏನೇ ಕೆಲಸವಿದ್ದರೂ ಸಕಲಾಕ್ಕೆ ಸದನಕ್ಕೆ ಹಾಜರಾಗುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಎಲ್ಲರಲ್ಲೂ ಮನಃ ಪರಿವರ್ತನೆಯಾಗಬೇಕು. ಮಂಗಳವಾರ ಸದನಕ್ಕೆ ಬೇಗ ಬಂದ ಶಾಸಕರು ಹೆಸರು ಉಲ್ಲೇಖಿಸಿ ರೈತನಿಗೆ ಮಾಲ್‌ನಲ್ಲಿ ಅಪಮಾನ ಮಾಡಿದ ವಿಚಾರವನ್ನು ಪ್ರಸ್ತಾಪಿಸಲು ಸಭಾಧ್ಯಕ್ಷರು ಮುಂದಾದರು. ಅಷ್ಟರಲ್ಲಿ ವಿರೋಧಪಕ್ಷದ ಶಾಸಕರು ಸದನಕ್ಕೆ ಆಗಮಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 mins ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

30 mins ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

4 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

9 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

9 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

9 hours ago