ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ವಿಸ್ತೃತ ಪೀಠಕ್ಕೆ ವಹಿಸಿ ಆದೇಶಿಸಿದೆ.
ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು.
ಈ ವೇಳೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಕಾನೂನು ದುರುಪಯೋಗವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂಬುದಾಗಿ ವಾದವನ್ನು ಮಂಡಿಸಲಾಯಿತು.
ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆ ಶಿವುಕಮಾರ್ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸೋದಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಮೂಲಕ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…