ರಾಜ್ಯ

ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರಿಂದಲೇ ಲೈಂಗಿಕ ಕಿರುಕುಳ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅತಿಥಿ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಕೇಸ್‌ ದಾಖಲಾಗಿದೆ.

ಉಪನ್ಯಾಸಕರಾದ ಸ್ವರೂಪ್‌ ಕುಮಾರ್‌, ರಾಮಾಂಜನೇಯ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಅತಿಥಿ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್‌ ಆಗಿವೆ.

ಇದನ್ನು ಓದಿ : ಕಳೆದ ಎರಡು ವರ್ಷಗಳಲ್ಲಿ ಕಾಡಾನೆ ದಾಳಿಯಿಂದ 97 ಮಂದಿ ಸಾವು: ಸಚಿವ ಈಶ್ವರ್‌ ಖಂಡ್ರೆ

ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕಾಲೇಜಿಗೆ ಕುಡಿದು ಬಂದು ಡ್ಯಾನ್ಸ್‌ ಮಾಡುತ್ತಿರುವ, ಅಂಧ ವಿದ್ಯಾರ್ಥಿನಿಯನ್ನು ಎತ್ತಿಕೊಂಡು ಕುಣಿಯುತ್ತಿರುವ ವಿಡಿಯೋ ವೈರಲ್‌ ಆಗಿವೆ.

ಅತಿಥಿ ಉಪನ್ಯಾಸಕ ರಾಮಾಂಜನೇಯ ವಿವಿ ಆವರಣದಲ್ಲಿ ಶರ್ಟ್‌ ಬಿಚ್ಚಿ ಡ್ಯಾನ್ಸ್‌ ಮಾಡಿದ್ದಾನೆ. ಅಲ್ಲದೇ ರಾಮಾಂಜನೇಯ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ಇಂಟರ್ನಲ್‌ ಮಾರ್ಕ್ಸ್‌ ನೀಡಲು ಹಣಕ್ಕೆ ಬೇಡಿಕೆ, ಅಂಬೇಡ್ಕರ್‌ ಜಯಂತಿ ಆಚರಣೆ ವೇಳೆ ವಿದ್ಯಾರ್ಥಿನಿ ಜೊತೆ ಡ್ಯಾನ್ಸ್‌, ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿವೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

3 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

3 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

4 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

7 hours ago