ರಾಜ್ಯ

ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರಿಂದಲೇ ಲೈಂಗಿಕ ಕಿರುಕುಳ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅತಿಥಿ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಕೇಸ್‌ ದಾಖಲಾಗಿದೆ.

ಉಪನ್ಯಾಸಕರಾದ ಸ್ವರೂಪ್‌ ಕುಮಾರ್‌, ರಾಮಾಂಜನೇಯ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಅತಿಥಿ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್‌ ಆಗಿವೆ.

ಇದನ್ನು ಓದಿ : ಕಳೆದ ಎರಡು ವರ್ಷಗಳಲ್ಲಿ ಕಾಡಾನೆ ದಾಳಿಯಿಂದ 97 ಮಂದಿ ಸಾವು: ಸಚಿವ ಈಶ್ವರ್‌ ಖಂಡ್ರೆ

ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕಾಲೇಜಿಗೆ ಕುಡಿದು ಬಂದು ಡ್ಯಾನ್ಸ್‌ ಮಾಡುತ್ತಿರುವ, ಅಂಧ ವಿದ್ಯಾರ್ಥಿನಿಯನ್ನು ಎತ್ತಿಕೊಂಡು ಕುಣಿಯುತ್ತಿರುವ ವಿಡಿಯೋ ವೈರಲ್‌ ಆಗಿವೆ.

ಅತಿಥಿ ಉಪನ್ಯಾಸಕ ರಾಮಾಂಜನೇಯ ವಿವಿ ಆವರಣದಲ್ಲಿ ಶರ್ಟ್‌ ಬಿಚ್ಚಿ ಡ್ಯಾನ್ಸ್‌ ಮಾಡಿದ್ದಾನೆ. ಅಲ್ಲದೇ ರಾಮಾಂಜನೇಯ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ಇಂಟರ್ನಲ್‌ ಮಾರ್ಕ್ಸ್‌ ನೀಡಲು ಹಣಕ್ಕೆ ಬೇಡಿಕೆ, ಅಂಬೇಡ್ಕರ್‌ ಜಯಂತಿ ಆಚರಣೆ ವೇಳೆ ವಿದ್ಯಾರ್ಥಿನಿ ಜೊತೆ ಡ್ಯಾನ್ಸ್‌, ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿವೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago