krishna bhairegowda
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ್ಮ ಕ್ಷೇತ್ರಕ್ಕೆ ಸೇರಿದ ಆಂಧ್ರಪ್ರದೇಶ ಗಡಿಭಾಗದಲ್ಲಿರುವ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕುನ್ನಾಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಈ ಹಿಂದೆ 2009ರಲ್ಲಿ ಹಿರಿಯ ಅಧಿಕಾರಿ ಎಂ.ಬಿ.ಪ್ರಕಾಶ್ ಅವರ ಸಮಿತಿ, ವೈಜ್ಞಾನಿಕ ಅಧ್ಯಯನ ಮಾಡಿ ಹೊಸ ತಾಲ್ಲೂಕುಗಳ ರಚನೆಗೆ ಶಿಫಾರಸ್ಸು ಮಾಡಿತ್ತು. ಆದರೆ ಸರ್ಕಾರ ಆ ವರದಿಯನ್ನು ಹೆಚ್ಚು ಪರಿಗಣಿಸಲಿಲ್ಲ. 2013-14ರಲ್ಲಿ 43 ಹೊಸ ತಾಲ್ಲೂಕುಗಳನ್ನು ರಚಿಸಲಾಗಿದೆ. ಆನಂತರ ಬಂದ ಸರ್ಕಾರಗಳು ಬೇರೆ ಬೇರೆ ಕಾರಣಗಳಿಗೆ ನೂತನ ತಾಲ್ಲೂಕುಗಳನ್ನು ಘೋಷಣೆ ಮಾಡಿವೆ ಎಂದು ಹೇಳಿದರು.
ಸದ್ಯದ ಪರಿಸ್ಥಿತಿಯಲ್ಲಿ ತಾಲ್ಲೂಕುಗಳ ರಚನೆ ಕಷ್ಟಸಾಧ್ಯ. ಮುಂದಿನ ದಿನಗಳಲ್ಲಿ ಸರ್ಕಾರ ಅದನ್ನು ಪರಿಶೀಲನೆ ನಡೆಸಲಿದೆ ಎಂದಾಗ ರಘುಮೂರ್ತಿ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಎಂ.ಬಿ.ಪ್ರಕಾಶ್ ಅವರ ಸಮಿತಿ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕನ್ನಾಗಿ ಪರಿಗಣಿಸಲು ಶಿಫಾರಸ್ಸು ಮಾಡಿದೆ. ಆದರೆ ಅದನ್ನು ಕಡೆಗಣಿಸಲಾಗಿದೆ. ತಾಲ್ಲೂಕಿನ ಜನರಿಗೆ ಆಡಳಿತಾತ್ಮಕ ಸಮಸ್ಯೆಗಳಿವೆ. ಪರಶುರಾಮಪುರ ಹೋಬಳಿಯನ್ನು ತಾಲ್ಲೂಕನ್ನಾಗಿ ಘೋಷಣೆ ಮಾಡಬೇಕೆಂದು ಪಟ್ಟು ಹಿಡಿದರು.
ಮುಂದಿನ ದಿನಗಳಲ್ಲಿ ಪರಿಶೀಲಿಸುವ ಭರವಸೆ ಮೂಲಕ ಸಚಿವರು, ಶಾಸಕರನ್ನು ಸಮಾಧಾನಪಡಿಸಿದರು.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್ಪಾತ್ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…