ರಾಜ್ಯ

ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ್ಮ ಕ್ಷೇತ್ರಕ್ಕೆ ಸೇರಿದ ಆಂಧ್ರಪ್ರದೇಶ ಗಡಿಭಾಗದಲ್ಲಿರುವ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕುನ್ನಾಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಈ ಹಿಂದೆ 2009ರಲ್ಲಿ ಹಿರಿಯ ಅಧಿಕಾರಿ ಎಂ.ಬಿ.ಪ್ರಕಾಶ್‌ ಅವರ ಸಮಿತಿ, ವೈಜ್ಞಾನಿಕ ಅಧ್ಯಯನ ಮಾಡಿ ಹೊಸ ತಾಲ್ಲೂಕುಗಳ ರಚನೆಗೆ ಶಿಫಾರಸ್ಸು ಮಾಡಿತ್ತು. ಆದರೆ ಸರ್ಕಾರ ಆ ವರದಿಯನ್ನು ಹೆಚ್ಚು ಪರಿಗಣಿಸಲಿಲ್ಲ. 2013-14ರಲ್ಲಿ 43 ಹೊಸ ತಾಲ್ಲೂಕುಗಳನ್ನು ರಚಿಸಲಾಗಿದೆ. ಆನಂತರ ಬಂದ ಸರ್ಕಾರಗಳು ಬೇರೆ ಬೇರೆ ಕಾರಣಗಳಿಗೆ ನೂತನ ತಾಲ್ಲೂಕುಗಳನ್ನು ಘೋಷಣೆ ಮಾಡಿವೆ ಎಂದು ಹೇಳಿದರು.

ಸದ್ಯದ ಪರಿಸ್ಥಿತಿಯಲ್ಲಿ ತಾಲ್ಲೂಕುಗಳ ರಚನೆ ಕಷ್ಟಸಾಧ್ಯ. ಮುಂದಿನ ದಿನಗಳಲ್ಲಿ ಸರ್ಕಾರ ಅದನ್ನು ಪರಿಶೀಲನೆ ನಡೆಸಲಿದೆ ಎಂದಾಗ ರಘುಮೂರ್ತಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಎಂ.ಬಿ.ಪ್ರಕಾಶ್‌ ಅವರ ಸಮಿತಿ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕನ್ನಾಗಿ ಪರಿಗಣಿಸಲು ಶಿಫಾರಸ್ಸು ಮಾಡಿದೆ. ಆದರೆ ಅದನ್ನು ಕಡೆಗಣಿಸಲಾಗಿದೆ. ತಾಲ್ಲೂಕಿನ ಜನರಿಗೆ ಆಡಳಿತಾತ್ಮಕ ಸಮಸ್ಯೆಗಳಿವೆ. ಪರಶುರಾಮಪುರ ಹೋಬಳಿಯನ್ನು ತಾಲ್ಲೂಕನ್ನಾಗಿ ಘೋಷಣೆ ಮಾಡಬೇಕೆಂದು ಪಟ್ಟು ಹಿಡಿದರು.

ಮುಂದಿನ ದಿನಗಳಲ್ಲಿ ಪರಿಶೀಲಿಸುವ ಭರವಸೆ ಮೂಲಕ ಸಚಿವರು, ಶಾಸಕರನ್ನು ಸಮಾಧಾನಪಡಿಸಿದರು.

ಆಂದೋಲನ ಡೆಸ್ಕ್

Recent Posts

ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

37 mins ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

52 mins ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

2 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

2 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago