ರಾಜ್ಯ

ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ್ಮ ಕ್ಷೇತ್ರಕ್ಕೆ ಸೇರಿದ ಆಂಧ್ರಪ್ರದೇಶ ಗಡಿಭಾಗದಲ್ಲಿರುವ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕುನ್ನಾಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಈ ಹಿಂದೆ 2009ರಲ್ಲಿ ಹಿರಿಯ ಅಧಿಕಾರಿ ಎಂ.ಬಿ.ಪ್ರಕಾಶ್‌ ಅವರ ಸಮಿತಿ, ವೈಜ್ಞಾನಿಕ ಅಧ್ಯಯನ ಮಾಡಿ ಹೊಸ ತಾಲ್ಲೂಕುಗಳ ರಚನೆಗೆ ಶಿಫಾರಸ್ಸು ಮಾಡಿತ್ತು. ಆದರೆ ಸರ್ಕಾರ ಆ ವರದಿಯನ್ನು ಹೆಚ್ಚು ಪರಿಗಣಿಸಲಿಲ್ಲ. 2013-14ರಲ್ಲಿ 43 ಹೊಸ ತಾಲ್ಲೂಕುಗಳನ್ನು ರಚಿಸಲಾಗಿದೆ. ಆನಂತರ ಬಂದ ಸರ್ಕಾರಗಳು ಬೇರೆ ಬೇರೆ ಕಾರಣಗಳಿಗೆ ನೂತನ ತಾಲ್ಲೂಕುಗಳನ್ನು ಘೋಷಣೆ ಮಾಡಿವೆ ಎಂದು ಹೇಳಿದರು.

ಸದ್ಯದ ಪರಿಸ್ಥಿತಿಯಲ್ಲಿ ತಾಲ್ಲೂಕುಗಳ ರಚನೆ ಕಷ್ಟಸಾಧ್ಯ. ಮುಂದಿನ ದಿನಗಳಲ್ಲಿ ಸರ್ಕಾರ ಅದನ್ನು ಪರಿಶೀಲನೆ ನಡೆಸಲಿದೆ ಎಂದಾಗ ರಘುಮೂರ್ತಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಎಂ.ಬಿ.ಪ್ರಕಾಶ್‌ ಅವರ ಸಮಿತಿ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕನ್ನಾಗಿ ಪರಿಗಣಿಸಲು ಶಿಫಾರಸ್ಸು ಮಾಡಿದೆ. ಆದರೆ ಅದನ್ನು ಕಡೆಗಣಿಸಲಾಗಿದೆ. ತಾಲ್ಲೂಕಿನ ಜನರಿಗೆ ಆಡಳಿತಾತ್ಮಕ ಸಮಸ್ಯೆಗಳಿವೆ. ಪರಶುರಾಮಪುರ ಹೋಬಳಿಯನ್ನು ತಾಲ್ಲೂಕನ್ನಾಗಿ ಘೋಷಣೆ ಮಾಡಬೇಕೆಂದು ಪಟ್ಟು ಹಿಡಿದರು.

ಮುಂದಿನ ದಿನಗಳಲ್ಲಿ ಪರಿಶೀಲಿಸುವ ಭರವಸೆ ಮೂಲಕ ಸಚಿವರು, ಶಾಸಕರನ್ನು ಸಮಾಧಾನಪಡಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

13 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

14 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

14 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

16 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

16 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

17 hours ago