ರಾಜ್ಯ

ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ್ಮ ಕ್ಷೇತ್ರಕ್ಕೆ ಸೇರಿದ ಆಂಧ್ರಪ್ರದೇಶ ಗಡಿಭಾಗದಲ್ಲಿರುವ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕುನ್ನಾಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಈ ಹಿಂದೆ 2009ರಲ್ಲಿ ಹಿರಿಯ ಅಧಿಕಾರಿ ಎಂ.ಬಿ.ಪ್ರಕಾಶ್‌ ಅವರ ಸಮಿತಿ, ವೈಜ್ಞಾನಿಕ ಅಧ್ಯಯನ ಮಾಡಿ ಹೊಸ ತಾಲ್ಲೂಕುಗಳ ರಚನೆಗೆ ಶಿಫಾರಸ್ಸು ಮಾಡಿತ್ತು. ಆದರೆ ಸರ್ಕಾರ ಆ ವರದಿಯನ್ನು ಹೆಚ್ಚು ಪರಿಗಣಿಸಲಿಲ್ಲ. 2013-14ರಲ್ಲಿ 43 ಹೊಸ ತಾಲ್ಲೂಕುಗಳನ್ನು ರಚಿಸಲಾಗಿದೆ. ಆನಂತರ ಬಂದ ಸರ್ಕಾರಗಳು ಬೇರೆ ಬೇರೆ ಕಾರಣಗಳಿಗೆ ನೂತನ ತಾಲ್ಲೂಕುಗಳನ್ನು ಘೋಷಣೆ ಮಾಡಿವೆ ಎಂದು ಹೇಳಿದರು.

ಸದ್ಯದ ಪರಿಸ್ಥಿತಿಯಲ್ಲಿ ತಾಲ್ಲೂಕುಗಳ ರಚನೆ ಕಷ್ಟಸಾಧ್ಯ. ಮುಂದಿನ ದಿನಗಳಲ್ಲಿ ಸರ್ಕಾರ ಅದನ್ನು ಪರಿಶೀಲನೆ ನಡೆಸಲಿದೆ ಎಂದಾಗ ರಘುಮೂರ್ತಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಎಂ.ಬಿ.ಪ್ರಕಾಶ್‌ ಅವರ ಸಮಿತಿ ಪರಶುರಾಮಪುರ ಹೋಬಳಿಯನ್ನು ಹೊಸ ತಾಲ್ಲೂಕನ್ನಾಗಿ ಪರಿಗಣಿಸಲು ಶಿಫಾರಸ್ಸು ಮಾಡಿದೆ. ಆದರೆ ಅದನ್ನು ಕಡೆಗಣಿಸಲಾಗಿದೆ. ತಾಲ್ಲೂಕಿನ ಜನರಿಗೆ ಆಡಳಿತಾತ್ಮಕ ಸಮಸ್ಯೆಗಳಿವೆ. ಪರಶುರಾಮಪುರ ಹೋಬಳಿಯನ್ನು ತಾಲ್ಲೂಕನ್ನಾಗಿ ಘೋಷಣೆ ಮಾಡಬೇಕೆಂದು ಪಟ್ಟು ಹಿಡಿದರು.

ಮುಂದಿನ ದಿನಗಳಲ್ಲಿ ಪರಿಶೀಲಿಸುವ ಭರವಸೆ ಮೂಲಕ ಸಚಿವರು, ಶಾಸಕರನ್ನು ಸಮಾಧಾನಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

12 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

13 mins ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

15 mins ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

20 mins ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago