ಕೊಪ್ಪಳ: ಸ್ವಪಕ್ಷದ ಬಗ್ಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದು, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ.
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ್, ಸಚಿವ ಗೋವಿಂದ ಕಾರಜೋಳ ಅವರಿದ್ದಾಗಲೂ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಸಲು ಆಗಲಿಲ್ಲ” ಅಸಮಾಧಾನ ಹೊರಹಾಕಿದ್ದಾರೆ.
ನಾನು ಅಂದು ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಹೊರ ಬರಬೇಕೆಂದಿದ್ದೆ. ಆದರೆ ಪಕ್ಷದ ಚೌಕಟ್ಟಿನಲ್ಲಿ ಇರಬೇಕಿದ್ದರಿಂದ ಅಲ್ಲೇ ಇದ್ದೆ. ಒಮ್ಮೊಮ್ಮೆ ಗುಲಾಮಿತನ ಎಂದು ಅನ್ನಿಸಿ ಬಿಡುತ್ತದೆ. ನಮ್ಮ ಜಿಲ್ಲೆಯಲ್ಲಿ ನನ್ನನ್ನೂ ಸೇರಿದಂತೆ ಒಬ್ಬರು ಡೈನಾಮಿಕ್ ಲೀಡರ್ ಇಲ್ಲದೇ ಇರುವುದು ಜಿಲ್ಲೆಯ ಅಭಿವೃದ್ದಿಗೆ ಹಿನ್ನಡೆ ಆಗಲು ಕಾರಣ ಎಂದು ಹೇಳಿದ್ದಾರೆ.
ಇನ್ನು ಸಂಗಣ್ಣ ಕರಡಿ ಅವರ ಈ ಹೇಳಿಕೆ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ. ಅವರು ಈ ಹಿಂದೆ ”ಸಂಸದರಿಗೆ ಟಿಕೆಟ್ ಇಲ್ಲ” ಎಂದು ಹೇಳಿದ್ದ ಸ್ವಪಕ್ಷದ ಶಾಸಕ ಯತ್ನಾಳ್ ವಿರುದ್ಧವೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…